ದೇಶ- ವಿದೇಶ

ಕದನ ವಿರಾಮ | ಇರಾನ್‌ ಮೇಲೆ 2ವಾರ ಬಾಂಬ್‌ ಹಾಕುವುದಿಲ್ಲ ಎಂದ ಟ್ರಂಪ್‌

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಇರಾನ್‌ಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದಾರೆ.

ಇರಾನ್ ಮೂಲಸೌಕರ್ಯಗಳು, ಅಣು ವಿದ್ಯುತ್ ಘಟಕಗಳು, ಸೇತುವೆಗಳ ಮೇಲಿನ ದಾಳಿಯ ನಿರ್ಧಾರವನ್ನೂ ಟ್ರಂಪ್ ಹಿಂಪಡೆದಿದ್ದಾರೆ. ಇದಕ್ಕೂ ಮೊದಲು ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಗಡುವು ಕೊಟ್ಟು, ಒಪ್ಪದಿದ್ದರೆ ಮಂಗಳವಾರ ರಾತ್ರಿ 8 ಗಂಟೆಗೆ ಇದರ ಅವಧಿ ಮುಗಿದು ಇರಾನ್‌ನ ಸರ್ವನಾಶ ಮಾಡುವುದಾಗಿ ಟ್ರಂಪ್ ಬೆದರಿಕೆ ಒಡ್ಡಿದ್ದರು. ಇದೀಗ ಈ ಗಡುವು 2 ವಾರ ಮುಂದೂಡಿಕೆಯಾಗಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರು ಮಧ್ಯಸ್ಥಿಕೆ ವಹಿಸಿ ಕೊಟ್ಟ ಪ್ರಸ್ತಾವನೆಯನ್ನು ಒಪ್ಪಿರುವುದಾಗಿ ಟ್ರಂಪ್ ಹೇಳಿದ್ದಾರೆ. ಈ ಪ್ರಸ್ತಾವನೆ ಪ್ರಕಾರ ಹರ್ಮುಜ್ ಜಲಸಂಧಿಯನ್ನು ತಕ್ಷಣವೇ ತೆರೆಯಬೇಕು. ಹಾಗೂ 2 ವಾರಗಳ ಕಾಲ ಕದನ ವಿರಾಮ ಮುಂದುವರಿಯುವ ಕುರಿತಾಗಿ ಇದೆ.

ಇನ್ನು ಈ 2 ವಾರಗಳ ಗಡುವನ್ನು ಇರಾನ್ ಜೊತೆ ಅಂತಿಮ ಒಪ್ಪಂದಕ್ಕೆ ಬರಲು ಬಳಸಲಾಗುವುದು ಎಂದು ಟ್ರಂಪ್ ಹೇಳಿದ್ದಾರೆ. ಈಗಾಗಲೇ ಅಮೆರಿಕ ಎಲ್ಲಾ ಮಿಲಿಟರಿ ಗುರಿಗಳನ್ನು ತಲುಪಿದ್ದು, ಮಧ್ಯಪ್ರಾಚ್ಯದಲ್ಲಿ ಒಂದು ದೀರ್ಘಕಾಲದ ಶಾಂತಿಗಾಗಿ ಒಂದು ನಿಖರ ಒಪ್ಪಂದದ ಹಾದಿಯಲ್ಲಿದ್ದೇವೆ ಎಂದಿದ್ದಾರೆ.

ಇರಾನ್‌ ಕೂಡಾ ತನ್ನ ಬೇಡಿಕೆಯ 10 ಅಂಶಗಳ ಪ್ರಸ್ತಾವನೆಯನ್ನು ಅಮೆರಿಕಕ್ಕೆ ಕೊಟ್ಟಿದೆ. ಇನ್ನೊಂದೆಡೆ ಹರ್ಮುಜ್ ತಕ್ಷಣ ತೆರೆದರೆ ಮಾತ್ರ 2 ವಾರಗಳ ಕದನ ವಿರಾಮ ಎಂದೂ ಟ್ರಂಪ್ ಷರತ್ತು ವಿಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಈ ಕದನ ವಿರಾಮವನ್ನು ಸ್ವಾಗತಿಸಿದ್ದಾರೆ. ಪಾಕಿಸ್ತಾನದ ವಿನಂತಿಯ ಮೇರೆಗೆ ಅಮರಿಕದ 15 ಅಂಶಗಳ ಪ್ರಸ್ತಾವನೆಯನ್ನು ಮಾತುಕತೆ ನಡೆಸಲು ಸಿದ್ದರಿದ್ದೇವೆ. ಅಮೆರಿಕ ದಾಳಿ ಮಾಡುವುದು ನಿಲ್ಲಿಸಿದರೆ, ನಮ್ಮ ಸಶಸ್ತ್ರ ಪಡೆಗಳು ಕೂಡಾ ಪ್ರತಿದಾಳಿಯನ್ನು ನಿಲ್ಲಿಸುತ್ತದೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

52 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

58 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago