ದೇಶ- ವಿದೇಶ

ಕದನ ವಿರಾಮ | ಇರಾನ್‌ ಮೇಲೆ 2ವಾರ ಬಾಂಬ್‌ ಹಾಕುವುದಿಲ್ಲ ಎಂದ ಟ್ರಂಪ್‌

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಇರಾನ್‌ಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದಾರೆ.

ಇರಾನ್ ಮೂಲಸೌಕರ್ಯಗಳು, ಅಣು ವಿದ್ಯುತ್ ಘಟಕಗಳು, ಸೇತುವೆಗಳ ಮೇಲಿನ ದಾಳಿಯ ನಿರ್ಧಾರವನ್ನೂ ಟ್ರಂಪ್ ಹಿಂಪಡೆದಿದ್ದಾರೆ. ಇದಕ್ಕೂ ಮೊದಲು ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಗಡುವು ಕೊಟ್ಟು, ಒಪ್ಪದಿದ್ದರೆ ಮಂಗಳವಾರ ರಾತ್ರಿ 8 ಗಂಟೆಗೆ ಇದರ ಅವಧಿ ಮುಗಿದು ಇರಾನ್‌ನ ಸರ್ವನಾಶ ಮಾಡುವುದಾಗಿ ಟ್ರಂಪ್ ಬೆದರಿಕೆ ಒಡ್ಡಿದ್ದರು. ಇದೀಗ ಈ ಗಡುವು 2 ವಾರ ಮುಂದೂಡಿಕೆಯಾಗಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರು ಮಧ್ಯಸ್ಥಿಕೆ ವಹಿಸಿ ಕೊಟ್ಟ ಪ್ರಸ್ತಾವನೆಯನ್ನು ಒಪ್ಪಿರುವುದಾಗಿ ಟ್ರಂಪ್ ಹೇಳಿದ್ದಾರೆ. ಈ ಪ್ರಸ್ತಾವನೆ ಪ್ರಕಾರ ಹರ್ಮುಜ್ ಜಲಸಂಧಿಯನ್ನು ತಕ್ಷಣವೇ ತೆರೆಯಬೇಕು. ಹಾಗೂ 2 ವಾರಗಳ ಕಾಲ ಕದನ ವಿರಾಮ ಮುಂದುವರಿಯುವ ಕುರಿತಾಗಿ ಇದೆ.

ಇನ್ನು ಈ 2 ವಾರಗಳ ಗಡುವನ್ನು ಇರಾನ್ ಜೊತೆ ಅಂತಿಮ ಒಪ್ಪಂದಕ್ಕೆ ಬರಲು ಬಳಸಲಾಗುವುದು ಎಂದು ಟ್ರಂಪ್ ಹೇಳಿದ್ದಾರೆ. ಈಗಾಗಲೇ ಅಮೆರಿಕ ಎಲ್ಲಾ ಮಿಲಿಟರಿ ಗುರಿಗಳನ್ನು ತಲುಪಿದ್ದು, ಮಧ್ಯಪ್ರಾಚ್ಯದಲ್ಲಿ ಒಂದು ದೀರ್ಘಕಾಲದ ಶಾಂತಿಗಾಗಿ ಒಂದು ನಿಖರ ಒಪ್ಪಂದದ ಹಾದಿಯಲ್ಲಿದ್ದೇವೆ ಎಂದಿದ್ದಾರೆ.

ಇರಾನ್‌ ಕೂಡಾ ತನ್ನ ಬೇಡಿಕೆಯ 10 ಅಂಶಗಳ ಪ್ರಸ್ತಾವನೆಯನ್ನು ಅಮೆರಿಕಕ್ಕೆ ಕೊಟ್ಟಿದೆ. ಇನ್ನೊಂದೆಡೆ ಹರ್ಮುಜ್ ತಕ್ಷಣ ತೆರೆದರೆ ಮಾತ್ರ 2 ವಾರಗಳ ಕದನ ವಿರಾಮ ಎಂದೂ ಟ್ರಂಪ್ ಷರತ್ತು ವಿಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಈ ಕದನ ವಿರಾಮವನ್ನು ಸ್ವಾಗತಿಸಿದ್ದಾರೆ. ಪಾಕಿಸ್ತಾನದ ವಿನಂತಿಯ ಮೇರೆಗೆ ಅಮರಿಕದ 15 ಅಂಶಗಳ ಪ್ರಸ್ತಾವನೆಯನ್ನು ಮಾತುಕತೆ ನಡೆಸಲು ಸಿದ್ದರಿದ್ದೇವೆ. ಅಮೆರಿಕ ದಾಳಿ ಮಾಡುವುದು ನಿಲ್ಲಿಸಿದರೆ, ನಮ್ಮ ಸಶಸ್ತ್ರ ಪಡೆಗಳು ಕೂಡಾ ಪ್ರತಿದಾಳಿಯನ್ನು ನಿಲ್ಲಿಸುತ್ತದೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

1 hour ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

1 hour ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

2 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

15 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

17 hours ago