ದೇಶ- ವಿದೇಶ

ಕದನ ವಿರಾಮ | ಇರಾನ್‌ ಮೇಲೆ 2ವಾರ ಬಾಂಬ್‌ ಹಾಕುವುದಿಲ್ಲ ಎಂದ ಟ್ರಂಪ್‌

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಇರಾನ್‌ಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದಾರೆ.

ಇರಾನ್ ಮೂಲಸೌಕರ್ಯಗಳು, ಅಣು ವಿದ್ಯುತ್ ಘಟಕಗಳು, ಸೇತುವೆಗಳ ಮೇಲಿನ ದಾಳಿಯ ನಿರ್ಧಾರವನ್ನೂ ಟ್ರಂಪ್ ಹಿಂಪಡೆದಿದ್ದಾರೆ. ಇದಕ್ಕೂ ಮೊದಲು ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಗಡುವು ಕೊಟ್ಟು, ಒಪ್ಪದಿದ್ದರೆ ಮಂಗಳವಾರ ರಾತ್ರಿ 8 ಗಂಟೆಗೆ ಇದರ ಅವಧಿ ಮುಗಿದು ಇರಾನ್‌ನ ಸರ್ವನಾಶ ಮಾಡುವುದಾಗಿ ಟ್ರಂಪ್ ಬೆದರಿಕೆ ಒಡ್ಡಿದ್ದರು. ಇದೀಗ ಈ ಗಡುವು 2 ವಾರ ಮುಂದೂಡಿಕೆಯಾಗಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರು ಮಧ್ಯಸ್ಥಿಕೆ ವಹಿಸಿ ಕೊಟ್ಟ ಪ್ರಸ್ತಾವನೆಯನ್ನು ಒಪ್ಪಿರುವುದಾಗಿ ಟ್ರಂಪ್ ಹೇಳಿದ್ದಾರೆ. ಈ ಪ್ರಸ್ತಾವನೆ ಪ್ರಕಾರ ಹರ್ಮುಜ್ ಜಲಸಂಧಿಯನ್ನು ತಕ್ಷಣವೇ ತೆರೆಯಬೇಕು. ಹಾಗೂ 2 ವಾರಗಳ ಕಾಲ ಕದನ ವಿರಾಮ ಮುಂದುವರಿಯುವ ಕುರಿತಾಗಿ ಇದೆ.

ಇನ್ನು ಈ 2 ವಾರಗಳ ಗಡುವನ್ನು ಇರಾನ್ ಜೊತೆ ಅಂತಿಮ ಒಪ್ಪಂದಕ್ಕೆ ಬರಲು ಬಳಸಲಾಗುವುದು ಎಂದು ಟ್ರಂಪ್ ಹೇಳಿದ್ದಾರೆ. ಈಗಾಗಲೇ ಅಮೆರಿಕ ಎಲ್ಲಾ ಮಿಲಿಟರಿ ಗುರಿಗಳನ್ನು ತಲುಪಿದ್ದು, ಮಧ್ಯಪ್ರಾಚ್ಯದಲ್ಲಿ ಒಂದು ದೀರ್ಘಕಾಲದ ಶಾಂತಿಗಾಗಿ ಒಂದು ನಿಖರ ಒಪ್ಪಂದದ ಹಾದಿಯಲ್ಲಿದ್ದೇವೆ ಎಂದಿದ್ದಾರೆ.

ಇರಾನ್‌ ಕೂಡಾ ತನ್ನ ಬೇಡಿಕೆಯ 10 ಅಂಶಗಳ ಪ್ರಸ್ತಾವನೆಯನ್ನು ಅಮೆರಿಕಕ್ಕೆ ಕೊಟ್ಟಿದೆ. ಇನ್ನೊಂದೆಡೆ ಹರ್ಮುಜ್ ತಕ್ಷಣ ತೆರೆದರೆ ಮಾತ್ರ 2 ವಾರಗಳ ಕದನ ವಿರಾಮ ಎಂದೂ ಟ್ರಂಪ್ ಷರತ್ತು ವಿಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಈ ಕದನ ವಿರಾಮವನ್ನು ಸ್ವಾಗತಿಸಿದ್ದಾರೆ. ಪಾಕಿಸ್ತಾನದ ವಿನಂತಿಯ ಮೇರೆಗೆ ಅಮರಿಕದ 15 ಅಂಶಗಳ ಪ್ರಸ್ತಾವನೆಯನ್ನು ಮಾತುಕತೆ ನಡೆಸಲು ಸಿದ್ದರಿದ್ದೇವೆ. ಅಮೆರಿಕ ದಾಳಿ ಮಾಡುವುದು ನಿಲ್ಲಿಸಿದರೆ, ನಮ್ಮ ಸಶಸ್ತ್ರ ಪಡೆಗಳು ಕೂಡಾ ಪ್ರತಿದಾಳಿಯನ್ನು ನಿಲ್ಲಿಸುತ್ತದೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago