ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷ ಟ್ರಂಪ್ ಅವರು ಹಾಗೂ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರ ನಡುವೆ ದ್ವಿಪಕ್ಷೀಯ ಒಪ್ಪಂದ ವೇಳೆ ವಾಗ್ವಾದ ನಡೆದಿದ್ದು, ಈ ಮಧ್ಯೆ ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.
ಅಮೆರಿಕಾದ ಶ್ವೇತಭವನದಲ್ಲಿ ಇಂದು(ಮಾರ್ಚ್.1) ದ್ವಿಪಕ್ಷೀಯ ಒಪ್ಪಂದದ ನಡೆಯುತ್ತಿದ್ದು, ಆರಂಭದಲ್ಲಿ ಅಮೆರಿಕ ಮತ್ತು ಉಕ್ರೇನ್ ನಡುವೆ ಖನಿಜ ಒಪ್ಪಂದಗಳ ನಡುವೆ ಚರ್ಚೆ ನಡೆಯಿತು. ಈ ವೇಳೆ ಭದ್ರತಾ ವಿಚಾರಗಳ ಬಗ್ಗೆ ಚರ್ಚಿಸಲು ಮುಂದಾದರು, ಆದರೆ ಟ್ರಂಪ್ ನಾನು ಭದ್ರತೆಯ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಈಗ ನಾನು ಖನಿಜ ಒಪ್ಪಂದಗಳ ಬಗ್ಗೆ ಮಾತನಾಡಲು ಬಯಸುತ್ತೇನೆ ಎಂದರು. ಈ ಮಧ್ಯೆ ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ, ಟ್ರಂಪ್ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನು ಶ್ವೇತಭವನದಿಂದ ಹೊರಹೋಗುವಂತೆ ಸೂಚಸುತ್ತಿದ್ದಂತೆ ಹೊರ ನಡೆದಿದ್ದಾರೆ.
ಇನ್ನು ಝಲೆನ್ಸ್ಕಿ ಭದ್ರತಾ ವಿಚಾರಗಳ ಬಗ್ಗೆ ಚರ್ಚಿಸಲು ಮುಂದಾದಾಗ ನೀವು ಲಕ್ಷಾಂತರ ಜನರರ ಜೀವಗಳೊಂದಿಗೆ ಆಟವಾಡುತ್ತಿದ್ದೀರಿ. ಅಲ್ಲದೇ 3ನೇ ಮಹಾಯುದ್ಧದಿಂದ ಜೂಜಾಡುತ್ತಿದ್ದೀರಿ, ನಿಮ್ಮಿಂದ ಯುದ್ಧ ನಡೆಯಬಹುದು. ನೀವು ಹೀಗೆ ಮಾಡುತ್ತಿರುವುದು ಈ ದೇಶಕ್ಕೆ ಅಗೌರವವನ್ನು ಉಂಟು ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ನೀವು ಧೈರ್ಯವಂತರಿರಬಹುದು, ಆದರೂ ಖನಿಜ ಒಪ್ಪಂದಕ್ಕೆ ಸಹಿ ಹಾಕಲೇಬೇಕು. ಇಲ್ಲದೇ ನಾವು ನಿಮಗೆ ಸಹಾಯ ಮಾಡುವುದಿಲ್ಲ. ನಾವು ಸಹಾಯ ಮಾಡದಿದ್ದರೆ, ನೀವು ಯುದ್ಧ ಮುಂದುವರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ನೀವು ಸಂಕಷ್ಟ ಎದುರಿಸಬೇಕಾಗುತ್ತದೆ ಎಂದರು. ಇದೇ ವೇಳೆ ಝೆಲೆನ್ಸ್ಕಿ ಮಾತನಾಡಿ, ಪತ್ರಕರ್ತರ ಎದುರು ನೀವು ಈ ರೀತಿ ಮಾತನಾಡುವುದು ಗೌರವ ತರುವುದಿಲ್ಲ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಟ್ರಂಪ್ ನಿಮ್ಮಿಂದ ಜಗತ್ತಿನಲ್ಲಿ 3ನೇ ಮಹಾಯುದ್ಧ ಸಂಭವಿಸಬಹದು. ಅಲ್ಲದೇ ಇದು ಇಡೀ ವಿಶ್ವವೇ ಸಮಸ್ಯೆಗೆ ಸಿಲುಕಿಕೊಳ್ಳಬಹುದು ಎಂದು ಕಿಡಿಕಾರಿದರು.
ಉಕ್ರೇನ್ಗೆ ಈಗಾಗಲೇ ಫ್ರಾನ್ಸ್, ಬ್ರಿಟನ್ ಹಾಗೂ ಇತರ ದೇಶಗಳು ಭದ್ರತೆ ಒದಗಿಸುತ್ತಿವೆ ಎಂದು ನನಗೆ ತಿಳಿದಿದೆ. ಆದರೆ ನಾವು ಯುದ್ಧವನ್ನು ಮುಂದುವರಿಸಲು ಸಿದ್ಧರಿಲ್ಲ. ಈ ಸಮಸ್ಯೆಯನ್ನು ಸಮಾಪ್ತಿ ಮಾಡಲು ಎದುರು ನೋಡುತ್ತಿದ್ದೇವೆ. ನಾವು ಉಕ್ರೇನ್ಗೆ ಬೇರೊಂದು ರೀತಿಯಲ್ಲಿ ಭದ್ರತೆ ನೀಡುತ್ತೇವೆ. ನಮ್ಮ ಕಾರ್ಮಿಕರು ಅಲ್ಲಿಯೇ ಇದ್ದು ಖನಿಜ ಸಂಪತ್ತನ್ನು ಹೊರ ತೆಗೆಯುತ್ತಾರೆ. ನಿಮ್ಮ ರಾಷ್ಟ್ರದಲ್ಲಿ ನಾವು ಉತ್ತಮ ಉತ್ಪನ್ನಗಳನ್ನು ತಯಾರಿಸುತ್ತೇವೆ ಎಂದು ವಿಶ್ವಾಸ ನೀಡಿದರು.
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…