ದೇಶ- ವಿದೇಶ

ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಿ: ಟ್ರಂಪ್‌

ವಾಷಿಂಗ್ಟನ್‌: ಅಮೆರಿಕಾದ ಅಧ್ಯಕ್ಷ ಟ್ರಂಪ್‌ ಅವರು ಹಾಗೂ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಅವರ ನಡುವೆ ದ್ವಿಪಕ್ಷೀಯ ಒಪ್ಪಂದ ವೇಳೆ ವಾಗ್ವಾದ ನಡೆದಿದ್ದು, ಈ ಮಧ್ಯೆ ರಷ್ಯಾ-ಉಕ್ರೇನ್‌ ಯುದ್ಧವನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.

ಅಮೆರಿಕಾದ ಶ್ವೇತಭವನದಲ್ಲಿ ಇಂದು(ಮಾರ್ಚ್.‌1) ದ್ವಿಪಕ್ಷೀಯ ಒಪ್ಪಂದದ ನಡೆಯುತ್ತಿದ್ದು, ಆರಂಭದಲ್ಲಿ ಅಮೆರಿಕ ಮತ್ತು ಉಕ್ರೇನ್‌ ನಡುವೆ ಖನಿಜ ಒಪ್ಪಂದಗಳ ನಡುವೆ ಚರ್ಚೆ ನಡೆಯಿತು. ಈ ವೇಳೆ ಭದ್ರತಾ ವಿಚಾರಗಳ ಬಗ್ಗೆ ಚರ್ಚಿಸಲು ಮುಂದಾದರು, ಆದರೆ ಟ್ರಂಪ್‌ ನಾನು ಭದ್ರತೆಯ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಈಗ ನಾನು ಖನಿಜ ಒಪ್ಪಂದಗಳ ಬಗ್ಗೆ ಮಾತನಾಡಲು ಬಯಸುತ್ತೇನೆ ಎಂದರು. ಈ ಮಧ್ಯೆ ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ, ಟ್ರಂಪ್‌ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನು ಶ್ವೇತಭವನದಿಂದ ಹೊರಹೋಗುವಂತೆ ಸೂಚಸುತ್ತಿದ್ದಂತೆ ಹೊರ ನಡೆದಿದ್ದಾರೆ.

ಇನ್ನು ಝಲೆನ್ಸ್ಕಿ ಭದ್ರತಾ ವಿಚಾರಗಳ ಬಗ್ಗೆ ಚರ್ಚಿಸಲು ಮುಂದಾದಾಗ ನೀವು ಲಕ್ಷಾಂತರ ಜನರರ ಜೀವಗಳೊಂದಿಗೆ ಆಟವಾಡುತ್ತಿದ್ದೀರಿ. ಅಲ್ಲದೇ 3ನೇ ಮಹಾಯುದ್ಧದಿಂದ ಜೂಜಾಡುತ್ತಿದ್ದೀರಿ, ನಿಮ್ಮಿಂದ ಯುದ್ಧ ನಡೆಯಬಹುದು. ನೀವು ಹೀಗೆ ಮಾಡುತ್ತಿರುವುದು ಈ ದೇಶಕ್ಕೆ ಅಗೌರವವನ್ನು ಉಂಟು ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ನೀವು ಧೈರ್ಯವಂತರಿರಬಹುದು, ಆದರೂ ಖನಿಜ ಒಪ್ಪಂದಕ್ಕೆ ಸಹಿ ಹಾಕಲೇಬೇಕು. ಇಲ್ಲದೇ ನಾವು ನಿಮಗೆ ಸಹಾಯ ಮಾಡುವುದಿಲ್ಲ. ನಾವು ಸಹಾಯ ಮಾಡದಿದ್ದರೆ, ನೀವು ಯುದ್ಧ ಮುಂದುವರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ನೀವು ಸಂಕಷ್ಟ ಎದುರಿಸಬೇಕಾಗುತ್ತದೆ ಎಂದರು. ಇದೇ ವೇಳೆ ಝೆಲೆನ್ಸ್ಕಿ ಮಾತನಾಡಿ, ಪತ್ರಕರ್ತರ ಎದುರು ನೀವು ಈ ರೀತಿ ಮಾತನಾಡುವುದು ಗೌರವ ತರುವುದಿಲ್ಲ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಟ್ರಂಪ್‌ ನಿಮ್ಮಿಂದ ಜಗತ್ತಿನಲ್ಲಿ 3ನೇ ಮಹಾಯುದ್ಧ ಸಂಭವಿಸಬಹದು. ಅಲ್ಲದೇ ಇದು ಇಡೀ ವಿಶ್ವವೇ ಸಮಸ್ಯೆಗೆ ಸಿಲುಕಿಕೊಳ್ಳಬಹುದು ಎಂದು ಕಿಡಿಕಾರಿದರು.

ಉಕ್ರೇನ್‌ಗೆ ಈಗಾಗಲೇ ಫ್ರಾನ್ಸ್‌, ಬ್ರಿಟನ್‌ ಹಾಗೂ ಇತರ ದೇಶಗಳು ಭದ್ರತೆ ಒದಗಿಸುತ್ತಿವೆ ಎಂದು ನನಗೆ ತಿಳಿದಿದೆ. ಆದರೆ ನಾವು ಯುದ್ಧವನ್ನು ಮುಂದುವರಿಸಲು ಸಿದ್ಧರಿಲ್ಲ. ಈ ಸಮಸ್ಯೆಯನ್ನು ಸಮಾಪ್ತಿ ಮಾಡಲು ಎದುರು ನೋಡುತ್ತಿದ್ದೇವೆ. ನಾವು ಉಕ್ರೇನ್‌ಗೆ ಬೇರೊಂದು ರೀತಿಯಲ್ಲಿ ಭದ್ರತೆ ನೀಡುತ್ತೇವೆ. ನಮ್ಮ ಕಾರ್ಮಿಕರು ಅಲ್ಲಿಯೇ ಇದ್ದು ಖನಿಜ ಸಂಪತ್ತನ್ನು ಹೊರ ತೆಗೆಯುತ್ತಾರೆ. ನಿಮ್ಮ ರಾಷ್ಟ್ರದಲ್ಲಿ ನಾವು ಉತ್ತಮ ಉತ್ಪನ್ನಗಳನ್ನು ತಯಾರಿಸುತ್ತೇವೆ ಎಂದು ವಿಶ್ವಾಸ ನೀಡಿದರು.

ಅರ್ಚನ ಎಸ್‌ ಎಸ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

44 mins ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

1 hour ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

2 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

3 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

4 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

5 hours ago