ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಕಠಿಣ ಬೆದರಿಕೆ ಹಾಕಿದ್ದಾರೆ.
ಏಪ್ರಿಲ್ 5ರಂದು ತಮ್ಮ ಸಾಮಾಜಿಕ ಮಾಧ್ಯಮ ಟ್ರೂಥ್ನಲ್ಲಿ ಪೋಸ್ಟ್ ಮಾಡಿರುವ ಅವರು, ಇರಾನ್ಗೆ 48 ಗಂಟೆಗಳ ಕಾಲ ಸಮಯ ನೀಡಿದ್ದಾರೆ.
ಗಡುವು ಸಮಯದ ಒಳಗೆ ಜಲಸಂಧಿಯನ್ನು ಪೂರ್ಣವಾಗಿ ತೆರೆಯಬೇಕು. ಇಲ್ಲವಾದರೆ ನಿಮ್ಮ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಈ ಹಿಂದೆಯೂ ಟ್ರಂಪ್ ಇದೇ ರೀತಿ ಎಚ್ಚರಿಕೆ ನೀಡಿದ್ದರು. ಆದರೆ ಇರಾನ್ ಇದುವರೆಗೂ ಬೆದರಿಕೆಗೆ ಕ್ಯಾರೆ ಎಂದಿಲ್ಲ.
ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ಸಂಪೂರ್ಣ ನಿಯಂತ್ರಣ ಸಾಧಿಸಿದೆ. ವಿಶ್ವದ ಒಂದು ಐದನೇ ಭಾಗದ ತೈಲ ಸಾಗಣೆಯ ಮುಖ್ಯ ಮಾರ್ಗವಾದ ಈ ಜಲಸಂಧಿ ಮುಚ್ಚಿರುವುದರಿಂದ ಜಾಗತಿಕ ತೈಲ ಸಂಚಾರಕ್ಕೆ ತೀವ್ರ ಬಿಕ್ಕಟ್ಟು ಉಂಟಾಗಿದೆ.
ಇದೇ ಸಂದರ್ಭದಲ್ಲಿ ಇರಾನ್ ಹೊಡೆದುರುಳಿಸಿದ ಅಮೆರಿಕದ F-15 ಯುದ್ಧ ವಿಮಾನದ ಪೈಲಟ್ ಅನ್ನು ರಕ್ಷಣೆ ಮಾಡಲಾಗಿದೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…