ದೇಶ- ವಿದೇಶ

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ ಸಚಿವಾಲಯ ತಿಳಿಸಿರುವುದಾಗಿ ವರದಿಯಾಗಿದೆ.

1977 ರ ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ ದುರುಪಯೋಗಪಡಿಸಿಕೊಂಡು ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹ ಮಂಗಳವಾರ ಬೆಳಗ್ಗೆ 10:30 ರಿಂದ (ಅಮೆರಿಕ ಕಾಲಮಾನ ಬೆಳಗ್ಗೆ 12.01 ರಿಂದ) ಸ್ಥಗಿತಗೊಳ್ಳಲಿವೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಯುಎಸ್ ಸುಪ್ರೀಂ ಕೋರ್ಟ್ ಟ್ರಂಪ್ ಜಾಗತೀಕ ಸುಂಕ ರದ್ದುಗೊಳಿಸಿ ತೀರ್ಪುಪ್ರಕಟಿಸಿದ 3 ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಸದ್ಯಕ್ಕೆ ಸುಂಕ ಸಂಗ್ರಹ ನಿಲ್ಲಿಸಲಾಗುತ್ತಿದೆ ಎಂದಷ್ಟೇ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಧ್ಯಂತರದಲ್ಲಿ ಮತ್ತೆ ಸುಂಕ ಸಂಗ್ರಹ ಮುಂದುವರಿಸುವುದಕ್ಕಾಗಲಿ ಅಥವಾ ಸಂಗ್ರಹಿಸಿರುವ ಸುಂಕ ಆಮದುದಾರರಿಗೆ ಮರುಪಾವತಿ ಮಾಡುವ ಬಗ್ಗೆಯಾಗಲಿ ವಿವರಣೆ ನೀಡಿಲ್ಲ.

ಅಲ್ಲದೇ ಕೋರ್ಟ್ ತೀರ್ಪು ಐಇಇಪಿಎ ಅಡಿಯಲ್ಲಿ ವಿಧಿಸಲಾದ ಸುಂಕಗಳಿಗೆ ಮಾತ್ರ ಅನ್ವಯಿಸುತ್ತದೆ. ಸೆಕ್ಷನ್ 232 ರಾಷ್ಟ್ರೀಯ-ಭದ್ರತಾ ಅಧಿಕಾರಗಳು ಮತ್ತು ಸೆಕ್ಷನ್ 301 ಅನ್ಯಾಯದ-ವ್ಯಾಪಾರ ಕಾನೂನುಗಳ ಅಡಿಯಲ್ಲಿ ವಿಧಿಸಿದ ಸುಂಕಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದೆ. ಹೀಗಾಗಿ ಯುಎಸ್ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಸೆಕ್ಷನ್ 232 ಹಾಗೂ ಸೆಕ್ಷನ್ 301 ಅಡಿಯಲ್ಲಿ ಟ್ರಂಪ್ ವಿಧಿಸಿರುವ ಹೆಚ್ಚುವರಿ 15% ಸುಂಕವು ಯಥಾಸ್ಥಿತಿಯಲ್ಲಿ ಮುಂದುವರಿಯುತ್ತದೆ.

ಇನ್ನೂ ಅಮೆರಿಕದ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ಅಮೆರಿಕಕ್ಕೆ ಸುಮಾರು 175 ಶತಕೋಟಿ ಡಾಲರ್‍ನಷ್ಟು ಆದಾಯ ಲಾಸ್ ಆಗುವ ಆತಂಕ ಎದುರಾಗಿದೆ. ಇಷ್ಟು ದೊಡ್ಡ ಮೊತ್ತವನ್ನು ಅಮೆರಿಕ ಮರುಪಾವತಿ ಮಾಡುವ ಅಪಾಯಕ್ಕೆ ಸಿಲುಕಬಹುದು. ಏಕೆಂದ್ರೆ ಕೋರ್ಟ್ ರದ್ದುಗೊಳಿಸಿರುವ ಸುಂಕಗಳು ಪ್ರತಿದಿನ 500 ದಶಲಕ್ಷ ಡಾಲರ್‍ಗಿಂತಲೂ ಹೆಚ್ಚು ಆದಾಯ ತರುತ್ತಿದ್ದವು ಎಂದು ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

8 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

8 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

9 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

9 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

10 hours ago

ಅಧಿಕಾರ ಜಟಾಪಟಿ ನಡುವೆ ಹೈಕಮಾಂಡ್‌ಗೆ ಪತ್ರ ಬರೆದ ಕಾಂಗ್ರೆಸ್‌ನ ಹೊಸ ಶಾಸಕರು : ಕಾರಣವೇನು?

ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ…

10 hours ago