ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ ಸಚಿವಾಲಯ ತಿಳಿಸಿರುವುದಾಗಿ ವರದಿಯಾಗಿದೆ.
1977 ರ ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ ದುರುಪಯೋಗಪಡಿಸಿಕೊಂಡು ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹ ಮಂಗಳವಾರ ಬೆಳಗ್ಗೆ 10:30 ರಿಂದ (ಅಮೆರಿಕ ಕಾಲಮಾನ ಬೆಳಗ್ಗೆ 12.01 ರಿಂದ) ಸ್ಥಗಿತಗೊಳ್ಳಲಿವೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಯುಎಸ್ ಸುಪ್ರೀಂ ಕೋರ್ಟ್ ಟ್ರಂಪ್ ಜಾಗತೀಕ ಸುಂಕ ರದ್ದುಗೊಳಿಸಿ ತೀರ್ಪುಪ್ರಕಟಿಸಿದ 3 ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ಸದ್ಯಕ್ಕೆ ಸುಂಕ ಸಂಗ್ರಹ ನಿಲ್ಲಿಸಲಾಗುತ್ತಿದೆ ಎಂದಷ್ಟೇ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಧ್ಯಂತರದಲ್ಲಿ ಮತ್ತೆ ಸುಂಕ ಸಂಗ್ರಹ ಮುಂದುವರಿಸುವುದಕ್ಕಾಗಲಿ ಅಥವಾ ಸಂಗ್ರಹಿಸಿರುವ ಸುಂಕ ಆಮದುದಾರರಿಗೆ ಮರುಪಾವತಿ ಮಾಡುವ ಬಗ್ಗೆಯಾಗಲಿ ವಿವರಣೆ ನೀಡಿಲ್ಲ.
ಅಲ್ಲದೇ ಕೋರ್ಟ್ ತೀರ್ಪು ಐಇಇಪಿಎ ಅಡಿಯಲ್ಲಿ ವಿಧಿಸಲಾದ ಸುಂಕಗಳಿಗೆ ಮಾತ್ರ ಅನ್ವಯಿಸುತ್ತದೆ. ಸೆಕ್ಷನ್ 232 ರಾಷ್ಟ್ರೀಯ-ಭದ್ರತಾ ಅಧಿಕಾರಗಳು ಮತ್ತು ಸೆಕ್ಷನ್ 301 ಅನ್ಯಾಯದ-ವ್ಯಾಪಾರ ಕಾನೂನುಗಳ ಅಡಿಯಲ್ಲಿ ವಿಧಿಸಿದ ಸುಂಕಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದೆ. ಹೀಗಾಗಿ ಯುಎಸ್ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಸೆಕ್ಷನ್ 232 ಹಾಗೂ ಸೆಕ್ಷನ್ 301 ಅಡಿಯಲ್ಲಿ ಟ್ರಂಪ್ ವಿಧಿಸಿರುವ ಹೆಚ್ಚುವರಿ 15% ಸುಂಕವು ಯಥಾಸ್ಥಿತಿಯಲ್ಲಿ ಮುಂದುವರಿಯುತ್ತದೆ.
ಇನ್ನೂ ಅಮೆರಿಕದ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ಅಮೆರಿಕಕ್ಕೆ ಸುಮಾರು 175 ಶತಕೋಟಿ ಡಾಲರ್ನಷ್ಟು ಆದಾಯ ಲಾಸ್ ಆಗುವ ಆತಂಕ ಎದುರಾಗಿದೆ. ಇಷ್ಟು ದೊಡ್ಡ ಮೊತ್ತವನ್ನು ಅಮೆರಿಕ ಮರುಪಾವತಿ ಮಾಡುವ ಅಪಾಯಕ್ಕೆ ಸಿಲುಕಬಹುದು. ಏಕೆಂದ್ರೆ ಕೋರ್ಟ್ ರದ್ದುಗೊಳಿಸಿರುವ ಸುಂಕಗಳು ಪ್ರತಿದಿನ 500 ದಶಲಕ್ಷ ಡಾಲರ್ಗಿಂತಲೂ ಹೆಚ್ಚು ಆದಾಯ ತರುತ್ತಿದ್ದವು ಎಂದು ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.
ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ರೋಮ್ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…
ಮೈಸೂರು : ಪಬ್ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್ನಲ್ಲಿ…
ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…
ಚೆನ್ನೈ: ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್ ಮೈಂಡ್ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯಲ್ಲಿ ಪ್ರಮುಖ ಆರೋಪಿಗಳನ್ನು…
ಡೆಹರಾಡೂನ್: ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…