ದೇಶ- ವಿದೇಶ

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ ಸಚಿವಾಲಯ ತಿಳಿಸಿರುವುದಾಗಿ ವರದಿಯಾಗಿದೆ.

1977 ರ ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ ದುರುಪಯೋಗಪಡಿಸಿಕೊಂಡು ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹ ಮಂಗಳವಾರ ಬೆಳಗ್ಗೆ 10:30 ರಿಂದ (ಅಮೆರಿಕ ಕಾಲಮಾನ ಬೆಳಗ್ಗೆ 12.01 ರಿಂದ) ಸ್ಥಗಿತಗೊಳ್ಳಲಿವೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಯುಎಸ್ ಸುಪ್ರೀಂ ಕೋರ್ಟ್ ಟ್ರಂಪ್ ಜಾಗತೀಕ ಸುಂಕ ರದ್ದುಗೊಳಿಸಿ ತೀರ್ಪುಪ್ರಕಟಿಸಿದ 3 ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಸದ್ಯಕ್ಕೆ ಸುಂಕ ಸಂಗ್ರಹ ನಿಲ್ಲಿಸಲಾಗುತ್ತಿದೆ ಎಂದಷ್ಟೇ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಧ್ಯಂತರದಲ್ಲಿ ಮತ್ತೆ ಸುಂಕ ಸಂಗ್ರಹ ಮುಂದುವರಿಸುವುದಕ್ಕಾಗಲಿ ಅಥವಾ ಸಂಗ್ರಹಿಸಿರುವ ಸುಂಕ ಆಮದುದಾರರಿಗೆ ಮರುಪಾವತಿ ಮಾಡುವ ಬಗ್ಗೆಯಾಗಲಿ ವಿವರಣೆ ನೀಡಿಲ್ಲ.

ಅಲ್ಲದೇ ಕೋರ್ಟ್ ತೀರ್ಪು ಐಇಇಪಿಎ ಅಡಿಯಲ್ಲಿ ವಿಧಿಸಲಾದ ಸುಂಕಗಳಿಗೆ ಮಾತ್ರ ಅನ್ವಯಿಸುತ್ತದೆ. ಸೆಕ್ಷನ್ 232 ರಾಷ್ಟ್ರೀಯ-ಭದ್ರತಾ ಅಧಿಕಾರಗಳು ಮತ್ತು ಸೆಕ್ಷನ್ 301 ಅನ್ಯಾಯದ-ವ್ಯಾಪಾರ ಕಾನೂನುಗಳ ಅಡಿಯಲ್ಲಿ ವಿಧಿಸಿದ ಸುಂಕಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದೆ. ಹೀಗಾಗಿ ಯುಎಸ್ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಸೆಕ್ಷನ್ 232 ಹಾಗೂ ಸೆಕ್ಷನ್ 301 ಅಡಿಯಲ್ಲಿ ಟ್ರಂಪ್ ವಿಧಿಸಿರುವ ಹೆಚ್ಚುವರಿ 15% ಸುಂಕವು ಯಥಾಸ್ಥಿತಿಯಲ್ಲಿ ಮುಂದುವರಿಯುತ್ತದೆ.

ಇನ್ನೂ ಅಮೆರಿಕದ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ಅಮೆರಿಕಕ್ಕೆ ಸುಮಾರು 175 ಶತಕೋಟಿ ಡಾಲರ್‍ನಷ್ಟು ಆದಾಯ ಲಾಸ್ ಆಗುವ ಆತಂಕ ಎದುರಾಗಿದೆ. ಇಷ್ಟು ದೊಡ್ಡ ಮೊತ್ತವನ್ನು ಅಮೆರಿಕ ಮರುಪಾವತಿ ಮಾಡುವ ಅಪಾಯಕ್ಕೆ ಸಿಲುಕಬಹುದು. ಏಕೆಂದ್ರೆ ಕೋರ್ಟ್ ರದ್ದುಗೊಳಿಸಿರುವ ಸುಂಕಗಳು ಪ್ರತಿದಿನ 500 ದಶಲಕ್ಷ ಡಾಲರ್‍ಗಿಂತಲೂ ಹೆಚ್ಚು ಆದಾಯ ತರುತ್ತಿದ್ದವು ಎಂದು ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago