ದೇಶ- ವಿದೇಶ

ಭಾರತ-ಪಾಕ್‌ ಕದನ ವಿರಾಮದ ಬಗ್ಗೆ 13 ಬಾರಿ ತುತ್ತೂರಿ ಊದಿದ ಟ್ರಂಪ್‌ ; ಪ್ರಧಾನಿ ಪ್ರತಿಕ್ರಿಯೆ ಯಾವಾಗ? : ಕಾಂಗ್ರೆಸ್‌ ಪ್ರಶ್ನೆ

ಹೊಸದಿಲ್ಲಿ : ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದ ಮಾಡಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 13 ಸಂದರ್ಭಗಳಲ್ಲಿ ಸಾರ್ವಜನಿಕವಾಗಿ ಕಹಳೆ ಬಾರಿಸಿದ್ದಾರೆ. ಆದರೆ, ಈ ಹೇಳಿಕೆ ಬಗ್ಗೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಯಾವಾಗ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಟ್ರಂಪ್ ಮೇ 10, 2025 ರಿಂದ ಜೂನ್ 13, 2025 ರ ನಡುವಿನ 34 ದಿನಗಳಲ್ಲಿ 3 ವಿಭಿನ್ನ ದೇಶಗಳಲ್ಲಿ 13 ವಿಭಿನ್ನ ಸಂದರ್ಭಗಳಲ್ಲಿ ಅಮೆರಿಕದೊಂದಿಗಿನ ವ್ಯಾಪಾರವನ್ನು ಕ್ಯಾರೆಟ್ ಮತ್ತು ಕೋಲಿನಂತೆ ಬಳಸಿಕೊಂಡು ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಮಾಡಿಸಿದ್ದು ನಾನು ಎಂದು ಸಾರ್ವಜನಿಕವಾಗಿ ಕಹಳೆ ಮೊಳಗಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿದ್ದಾರೆ.

ಟ್ರಂಪ್ ಎರಡೂ ದೇಶಗಳ ಮೇಲೆ ಸಮಾನವಾಗಿ ಹೊಗಳಿಕೆಯ ಸುರಿಮಳೆಗೈದಿದ್ದಾರೆ. ನೀವು ಯಾವಾಗ ಮಾತನಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಉಲ್ಲೇಖಗಳು ಮತ್ತು ಮಾಧ್ಯಮ ವರದಿಗಳ ಲಿಂಕ್‍ಗಳೊಂದಿಗೆ ಟ್ರಂಪ್ ಹೇಳಿಕೆಗಳನ್ನು ನೀಡಿದ ಸಂದರ್ಭಗಳ ಪಟ್ಟಿ ಮತ್ತು ವಿವರಗಳನ್ನು ರಮೇಶ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago