ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು ದಿನಗಳ ಕಾಲಾವಕಾಶ ನೀಡಿದ್ದಾರೆ.
ಫಾಕ್ಸ್ ನ್ಯೂಸ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಟ್ರಂಪ್ ಅವರು, ಒಂದು ವೇಳೆ ಇರಾನ್ ತೈಲ ರಫ್ತು ಮಾಡಲು ಸಾಧ್ಯವಾಗದಿದ್ದರೆ, ತೈಲ ಸಂಗ್ರಹಣಾ ಸಾಮರ್ಥ್ಯ ಮೀರಿ ಪೈಪ್ಲೈನ್ಗಳ ಒಳಗೆ ಒತ್ತಡ ಹೆಚ್ಚಾಗಲಿದೆ. ಇದರಿಂದಾಗಿ ಪೈಪ್ಲೈನ್ಗಳು “ಒಳಗಿನಿಂದಲೇ ಸ್ಫೋಟಗೊಳ್ಳಲಿವೆ” ಎಂದು ಅವರು ಎಚ್ಚರಿಸಿದ್ದಾರೆ.
ಅಮೆರಿಕದ ನೌಕಾಪಡೆಯು ಇರಾನ್ನ ಬಂದರುಗಳನ್ನು ಸಂಪೂರ್ಣವಾಗಿ ದಿಗ್ಬಂಧನ ಮಾಡಿದ್ದರಿಂದ ಇರಾನ್ಗೆ ತನ್ನ ತೈಲವನ್ನು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ತೈಲ ಹರಿವು ನಿಂತರೆ, ಪೈಪ್ಲೈನ್ಗಳಲ್ಲಿ ಅತಿಯಾದ ಒತ್ತಡ ಉಂಟಾಗಿ ಅವು ಯಾಂತ್ರಿಕವಾಗಿ ಮತ್ತು ತಾಂತ್ರಿಕವಾಗಿ ಹಾನಿಗೊಳಗಾಗುತ್ತವೆ ಎಂದು ಟ್ರಂಪ್ ಹೇಳಿದ್ದಾರೆ.
ಈ ರೀತಿ ಪೈಪ್ಲೈನ್ಗಳು ಸ್ಫೋಟಗೊಂಡರೆ ಅಥವಾ ಹಾನಿಗೊಳಗಾದರೆ ಅದನ್ನು ಮೊದಲಿನ ಸ್ಥಿತಿಗೆ ತರಲು ಸಾಧ್ಯವಿಲ್ಲ. ಇರಾನ್ ತನ್ನ ಒಟ್ಟು ತೈಲ ಉತ್ಪಾದನಾ ಸಾಮರ್ಥ್ಯದ ಶೇ.50 ರಷ್ಟು ಭಾಗವನ್ನು ಶಾಶ್ವತವಾಗಿ ಕಳೆದುಕೊಳ್ಳಬಹುದು ಎಂದು ತಿಳಿಸಿದರು.
ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಪಾಕಿಸ್ತಾನದ ಮೂಲಕ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಅಮೆರಿಕ ತನ್ನ ಆರ್ಥಿಕ ದಿಗ್ಬಂಧನವನ್ನು ಹಿಂತೆಗೆದುಕೊಂಡರೆ, ಜಾಗತಿಕ ತೈಲ ಸಾಗಣೆಗೆ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಾಗಿ ಇರಾನ್ ಹೇಳಿದೆ.
ಇರಾನ್ ತನ್ನ ದೇಶದಲ್ಲಿ ನಡೆಸುತ್ತಿರುವ ಯುರೇನಿಯಂ ಪುಷ್ಟೀಕರಣ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಇರಾನ್ ಬಳಿ ಇರುವ ಸುಮಾರು 440 ಕೆಜಿಗಿಂತ ಹೆಚ್ಚು ಪ್ರಮಾಣದ ಶೇ. 60 ರಷ್ಟು ಪುಷ್ಟೀಕರಿಸಿದ ಯುರೇನಿಯಂ ದಾಸ್ತಾನನ್ನು ಸಂಪೂರ್ಣವಾಗಿ ಅಮೆರಿಕಕ್ಕೆ ಅಥವಾ ಯಾವುದಾದರೂ ಮೂರನೇ ದೇಶಕ್ಕೆ ಹಸ್ತಾಂತರಿಸಬೇಕು ಎಂಬ ಬೇಡಿಕೆಯನ್ನು ಅಮೆರಿಕ ಇರಿಸಿದೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…