ದೇಶ- ವಿದೇಶ

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು ದಿನಗಳ ಕಾಲಾವಕಾಶ ನೀಡಿದ್ದಾರೆ.

ಫಾಕ್ಸ್ ನ್ಯೂಸ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಟ್ರಂಪ್ ಅವರು, ಒಂದು ವೇಳೆ ಇರಾನ್ ತೈಲ ರಫ್ತು ಮಾಡಲು ಸಾಧ್ಯವಾಗದಿದ್ದರೆ, ತೈಲ ಸಂಗ್ರಹಣಾ ಸಾಮರ್ಥ್ಯ ಮೀರಿ ಪೈಪ್‌ಲೈನ್‌ಗಳ ಒಳಗೆ ಒತ್ತಡ ಹೆಚ್ಚಾಗಲಿದೆ. ಇದರಿಂದಾಗಿ ಪೈಪ್‌ಲೈನ್‌ಗಳು “ಒಳಗಿನಿಂದಲೇ ಸ್ಫೋಟಗೊಳ್ಳಲಿವೆ” ಎಂದು ಅವರು ಎಚ್ಚರಿಸಿದ್ದಾರೆ.

ಅಮೆರಿಕದ ನೌಕಾಪಡೆಯು ಇರಾನ್‌ನ ಬಂದರುಗಳನ್ನು ಸಂಪೂರ್ಣವಾಗಿ ದಿಗ್ಬಂಧನ ಮಾಡಿದ್ದರಿಂದ ಇರಾನ್‌ಗೆ ತನ್ನ ತೈಲವನ್ನು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ತೈಲ ಹರಿವು ನಿಂತರೆ, ಪೈಪ್‌ಲೈನ್‌ಗಳಲ್ಲಿ ಅತಿಯಾದ ಒತ್ತಡ ಉಂಟಾಗಿ ಅವು ಯಾಂತ್ರಿಕವಾಗಿ ಮತ್ತು ತಾಂತ್ರಿಕವಾಗಿ ಹಾನಿಗೊಳಗಾಗುತ್ತವೆ ಎಂದು ಟ್ರಂಪ್ ಹೇಳಿದ್ದಾರೆ.

ಈ ರೀತಿ ಪೈಪ್‌ಲೈನ್‌ಗಳು ಸ್ಫೋಟಗೊಂಡರೆ ಅಥವಾ ಹಾನಿಗೊಳಗಾದರೆ ಅದನ್ನು ಮೊದಲಿನ ಸ್ಥಿತಿಗೆ ತರಲು ಸಾಧ್ಯವಿಲ್ಲ. ಇರಾನ್ ತನ್ನ ಒಟ್ಟು ತೈಲ ಉತ್ಪಾದನಾ ಸಾಮರ್ಥ್ಯದ ಶೇ.50 ರಷ್ಟು ಭಾಗವನ್ನು ಶಾಶ್ವತವಾಗಿ ಕಳೆದುಕೊಳ್ಳಬಹುದು ಎಂದು ತಿಳಿಸಿದರು.

ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಪಾಕಿಸ್ತಾನದ ಮೂಲಕ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಅಮೆರಿಕ ತನ್ನ ಆರ್ಥಿಕ ದಿಗ್ಬಂಧನವನ್ನು ಹಿಂತೆಗೆದುಕೊಂಡರೆ, ಜಾಗತಿಕ ತೈಲ ಸಾಗಣೆಗೆ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಾಗಿ ಇರಾನ್ ಹೇಳಿದೆ.

ಇರಾನ್ ತನ್ನ ದೇಶದಲ್ಲಿ ನಡೆಸುತ್ತಿರುವ ಯುರೇನಿಯಂ ಪುಷ್ಟೀಕರಣ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಇರಾನ್ ಬಳಿ ಇರುವ ಸುಮಾರು 440 ಕೆಜಿಗಿಂತ ಹೆಚ್ಚು ಪ್ರಮಾಣದ ಶೇ. 60 ರಷ್ಟು ಪುಷ್ಟೀಕರಿಸಿದ ಯುರೇನಿಯಂ ದಾಸ್ತಾನನ್ನು ಸಂಪೂರ್ಣವಾಗಿ ಅಮೆರಿಕಕ್ಕೆ ಅಥವಾ ಯಾವುದಾದರೂ ಮೂರನೇ ದೇಶಕ್ಕೆ ಹಸ್ತಾಂತರಿಸಬೇಕು ಎಂಬ ಬೇಡಿಕೆಯನ್ನು ಅಮೆರಿಕ ಇರಿಸಿದೆ.

 

ಆಂದೋಲನ ಡೆಸ್ಕ್

Recent Posts

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

13 mins ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

22 mins ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

32 mins ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

1 hour ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

2 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

3 hours ago