ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಇರಾನ್ ಪ್ರಸ್ತಾವ ಕರಡು ನೋಡಿದ್ದೇನೆ. ಪೂರ್ಣ ಪಠ್ಯ ಈಗ ನನ್ನ ಕೈ ಸೇರಲಿದೆ. ಆದರೆ ಕಳೆದ 47 ವರ್ಷದಲ್ಲಿ ಮಾನವತೆಗೆ ಮಾಡಿದ ಹಾನಿಗೆ ಇರಾನ್ ಇನ್ನೂ ದೊಡ್ಡ ಬೆಲೆ ತೆತ್ತಿಲ್ಲ. ಹೀಗಾಗಿ ಈ ಪ್ರಸ್ತಾವ ಒಪ್ಪುವಂತಹದ್ದು ಎಂದು ನನಗೆ ಅನ್ನಿಸುತ್ತಿಲ್ಲ ಎಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.
‘ಒಂದು ವೇಳೆ ಅವರು ಕೆಟ್ಟದಾಗಿ ವರ್ತಿಸಿದರೆ, ಏನಾದರೂ ತಪ್ಪು ಮಾಡಿದರೆ… ದಾಳಿ ಮತ್ತೆ ಆರಂಭವಾಗುವ ಸಾಧ್ಯತೆ ಖಂಡಿತ ಇದೆʼ ಎಂದು ಟ್ರಂಪ್ ಇದೇ ವೇಳೆ ಸ್ಪಷ್ಟಪಡಿಸಿದರು.
14 ಅಂಶಗಳ ಪ್ರಸ್ತಾವದಲ್ಲಿ ಏನಿದೆ?
1. ಎಲ್ಲ ರಂಗಗಳಲ್ಲೂ ಕದನ ವಿರಾಮ.
2. ಒಂದು ತಿಂಗಳಲ್ಲಿ ಹಾರ್ಮುಜ್ ಜಲಸಂಧಿ ಪುನಃ ತೆರೆಯುವುದು.
3. ಅಮೆರಿಕದ ನೌಕಾ ದಿಗ್ಬಂಧನ ತೆರವು.
4. ಇರಾನ್ ಮತ್ತು ಲೆಬನಾನ್ನಲ್ಲಿ ಶಾಶ್ವತ ಶಾಂತಿಗೆ ಕ್ರಮ.
5. ಪರಮಾಣು ಕಾರ್ಯಕ್ರಮ ಕುರಿತ ಮಾತುಕತೆಯನ್ನು ನಂತರದ ಹಂತಕ್ಕೆ ಮುಂದೂಡುವುದು ಸೇರಿದಂತೆ 14 ಅಂಶಗಳಿವೆ.
ಯುದ್ಧ ವಿರಾಮದ ನಡುವೆಯೂ ಉದ್ವಿಗ್ನತೆ
ಅಮೆರಿಕ-ಇಸ್ರೇಲ್ ಫೆಬ್ರವರಿ ಅಂತ್ಯದಲ್ಲಿ ಆರಂಭಿಸಿದ ದಾಳಿ ಏಪ್ರಿಲ್ 8ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಆದರೆ ಪಾಕಿಸ್ತಾನದಲ್ಲಿ ನಡೆದ ಒಂದು ಸುತ್ತಿನ ಶಾಂತಿ ಮಾತುಕತೆ ವಿಫಲವಾಗಿತ್ತು.
ಇರಾನ್ ಸೇನಾ ಕಮಾಂಡ್ನ ಹಿರಿಯ ಅಧಿಕಾರಿ ಮೊಹಮ್ಮದ್ ಜಾಫರ್ ಅಸಾದಿ, ‘ಅಮೆರಿಕದೊಂದಿಗೆ ಮತ್ತೆ ಯುದ್ಧ ಸಂಭವಿಸುವ ಸಾಧ್ಯತೆ ಇದೆ’ ಎಂದು ಶನಿವಾರ ಎಚ್ಚರಿಸಿದ್ದಾರೆ.
ಜಲಸಂಧಿ ಬಿಕ್ಕಟ್ಟು, ತೈಲ ಮಾರುಕಟ್ಟೆಗೆ ಹೊಡೆತ
ಜಾಗತಿಕ ತೈಲ-ಅನಿಲ ಸರಬರಾಜಿನ ಶೇ.20ರಷ್ಟು ಸಾಗುವ ಹಾರ್ಮುಜ್ ಜಲಸಂಧಿಯನ್ನು ಇರಾನ್ ನಿರ್ಬಂಧಿಸಿದ್ದರೆ, ಅಮೆರಿಕ ಇರಾನ್ ಬಂದರುಗಳ ಮೇಲೆ ದಿಗ್ಬಂಧನ ಹೇರಿದೆ. ಇದರಿಂದ ತೈಲ ಬೆಲೆ ಗಗನಕ್ಕೇರಿದೆ.
‘ಇರಾನ್ ಪರಮಾಣು ಅಸ್ತ್ರ ಹೊಂದಲು ನಾವು ಬಿಡುವುದಿಲ್ಲ. ಒಪ್ಪಂದ ಬೇಕೆಂದರೆ ಅವರೇ ಮೊದಲು ಬದಲಾಗಬೇಕು’ ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.
ಸದ್ಯ ಉಭಯ ದೇಶಗಳ ನಡುವೆ ನೇರ ಮಾತುಕತೆ ಇಲ್ಲ. ಮಧ್ಯವರ್ತಿಗಳ ಮೂಲಕ ಸಂದೇಶ ವಿನಿಮಯ ಮಾತ್ರ ನಡೆಯುತ್ತಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ತಿಳಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…