ದೇಶ- ವಿದೇಶ

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಇರಾನ್ ಪ್ರಸ್ತಾವ ಕರಡು ನೋಡಿದ್ದೇನೆ. ಪೂರ್ಣ ಪಠ್ಯ ಈಗ ನನ್ನ ಕೈ ಸೇರಲಿದೆ. ಆದರೆ ಕಳೆದ 47 ವರ್ಷದಲ್ಲಿ ಮಾನವತೆಗೆ ಮಾಡಿದ ಹಾನಿಗೆ ಇರಾನ್ ಇನ್ನೂ ದೊಡ್ಡ ಬೆಲೆ ತೆತ್ತಿಲ್ಲ. ಹೀಗಾಗಿ ಈ ಪ್ರಸ್ತಾವ ಒಪ್ಪುವಂತಹದ್ದು ಎಂದು ನನಗೆ ಅನ್ನಿಸುತ್ತಿಲ್ಲ ಎಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

‘ಒಂದು ವೇಳೆ ಅವರು ಕೆಟ್ಟದಾಗಿ ವರ್ತಿಸಿದರೆ, ಏನಾದರೂ ತಪ್ಪು ಮಾಡಿದರೆ… ದಾಳಿ ಮತ್ತೆ ಆರಂಭವಾಗುವ ಸಾಧ್ಯತೆ ಖಂಡಿತ ಇದೆʼ ಎಂದು ಟ್ರಂಪ್ ಇದೇ ವೇಳೆ ಸ್ಪಷ್ಟಪಡಿಸಿದರು.

14 ಅಂಶಗಳ ಪ್ರಸ್ತಾವದಲ್ಲಿ ಏನಿದೆ?

1. ಎಲ್ಲ ರಂಗಗಳಲ್ಲೂ ಕದನ ವಿರಾಮ.
2. ಒಂದು ತಿಂಗಳಲ್ಲಿ ಹಾರ್ಮುಜ್ ಜಲಸಂಧಿ ಪುನಃ ತೆರೆಯುವುದು.
3. ಅಮೆರಿಕದ ನೌಕಾ ದಿಗ್ಬಂಧನ ತೆರವು.
4. ಇರಾನ್ ಮತ್ತು ಲೆಬನಾನ್‌ನಲ್ಲಿ ಶಾಶ್ವತ ಶಾಂತಿಗೆ ಕ್ರಮ.
5. ಪರಮಾಣು ಕಾರ್ಯಕ್ರಮ ಕುರಿತ ಮಾತುಕತೆಯನ್ನು ನಂತರದ ಹಂತಕ್ಕೆ ಮುಂದೂಡುವುದು ಸೇರಿದಂತೆ 14 ಅಂಶಗಳಿವೆ.

ಯುದ್ಧ ವಿರಾಮದ ನಡುವೆಯೂ ಉದ್ವಿಗ್ನತೆ
ಅಮೆರಿಕ-ಇಸ್ರೇಲ್ ಫೆಬ್ರವರಿ ಅಂತ್ಯದಲ್ಲಿ ಆರಂಭಿಸಿದ ದಾಳಿ ಏಪ್ರಿಲ್ 8ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಆದರೆ ಪಾಕಿಸ್ತಾನದಲ್ಲಿ ನಡೆದ ಒಂದು ಸುತ್ತಿನ ಶಾಂತಿ ಮಾತುಕತೆ ವಿಫಲವಾಗಿತ್ತು.

ಇರಾನ್ ಸೇನಾ ಕಮಾಂಡ್‌ನ ಹಿರಿಯ ಅಧಿಕಾರಿ ಮೊಹಮ್ಮದ್ ಜಾಫರ್ ಅಸಾದಿ, ‘ಅಮೆರಿಕದೊಂದಿಗೆ ಮತ್ತೆ ಯುದ್ಧ ಸಂಭವಿಸುವ ಸಾಧ್ಯತೆ ಇದೆ’ ಎಂದು ಶನಿವಾರ ಎಚ್ಚರಿಸಿದ್ದಾರೆ.

ಜಲಸಂಧಿ ಬಿಕ್ಕಟ್ಟು, ತೈಲ ಮಾರುಕಟ್ಟೆಗೆ ಹೊಡೆತ
ಜಾಗತಿಕ ತೈಲ-ಅನಿಲ ಸರಬರಾಜಿನ ಶೇ.20ರಷ್ಟು ಸಾಗುವ ಹಾರ್ಮುಜ್ ಜಲಸಂಧಿಯನ್ನು ಇರಾನ್ ನಿರ್ಬಂಧಿಸಿದ್ದರೆ, ಅಮೆರಿಕ ಇರಾನ್ ಬಂದರುಗಳ ಮೇಲೆ ದಿಗ್ಬಂಧನ ಹೇರಿದೆ. ಇದರಿಂದ ತೈಲ ಬೆಲೆ ಗಗನಕ್ಕೇರಿದೆ.

‘ಇರಾನ್ ಪರಮಾಣು ಅಸ್ತ್ರ ಹೊಂದಲು ನಾವು ಬಿಡುವುದಿಲ್ಲ. ಒಪ್ಪಂದ ಬೇಕೆಂದರೆ ಅವರೇ ಮೊದಲು ಬದಲಾಗಬೇಕು’ ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

ಸದ್ಯ ಉಭಯ ದೇಶಗಳ ನಡುವೆ ನೇರ ಮಾತುಕತೆ ಇಲ್ಲ. ಮಧ್ಯವರ್ತಿಗಳ ಮೂಲಕ ಸಂದೇಶ ವಿನಿಮಯ ಮಾತ್ರ ನಡೆಯುತ್ತಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

11 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

11 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

11 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

12 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

13 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

21 hours ago