ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು ಇರಾನ್ ಸ್ವೀಕರಿಸದಿದ್ದರೆ, ಇರಾನ್ನ ಪ್ರತಿ ವಿದ್ಯುತ್ ಸ್ಥಾವರ ಮತ್ತು ಪ್ರತಿ ಸೇತುವೆಯನ್ನು ನಾಶ ಮಾಡುತ್ತೇವೆ” ಎಂದು ಹೇಳಿದ್ದಾರೆ.
ಇರಾನ್ ನಿನ್ನೆ ಹೊರ್ಮುಜ್ ಜಲಸಂಧಿಯಲ್ಲಿ ಗುಂಡಿನ ದಾಳಿ ನಡೆಸಲು ನಿರ್ಧರಿಸಿದೆ. ಇದು ಕದನ ವಿರಾಮವಾಗಿದೆ ಎಂದು ಟ್ರಂಪ್ ಇರಾನ್ ಮೇಲೆ ಆಪಾದನೆ ಮಾಡಿದ್ದಾರೆ.
ಅಮೆರಿಕ ಇನ್ನು ಮುಂದೆ ಇರಾನ್ನೊಂದಿಗೆ ಸೌಜನ್ಯದಿಂದ ವರ್ತಿಸುವುದಿಲ್ಲ. ಇದು ಇರಾನ್ಗೆ ಸ್ಪಷ್ಟ ಎಚ್ಚರಿಕೆ ಎಂದಿದ್ದಾರೆ. ಅಮೆರಿಕದ ನೌಕಾ ನಿರ್ಬಂಧವನ್ನು ಉಲ್ಲಂಘಿಸಲು ಪ್ರಯತ್ನಿಸಿದ ಹಡಗಿಗೆ ಮೊದಲು ಹಲವು ಎಚ್ಚರಿಕೆ ನೀಡಲಾಗಿತ್ತು. ಆದರೆ ಇರಾನ್ ಸಿಬ್ಬಂದಿ ಕೇಳದಿದ್ದ ಕಾರಣ, ಯುಎಸ್ಎಸ್ ಸ್ಪ್ರುಯನ್ಸ್ ನೌಕೆಯು ಹಡಗಿನ ಎಂಜಿನ್ ರೂಮ್ಗೆ ಗುಂಡು ಹಾರಿಸಿ ನಿಷ್ಕ್ರಿಯಗೊಳಿಸಿ, ನಂತರ ಮರೀನ್ಗಳು ಹಡಗನ್ನು ಪೂರ್ಣ ವಶಪಡಿಸಿಕೊಂಡರು ಎಂದು ಟ್ರಂಪ್ ತಿಳಿಸಿದ್ದಾರೆ.
ಅಮೆರಿಕ-ಇರಾನ್ ನಡುವೆ ಈ ವಾರ ಪಾಕಿಸ್ತಾನದಲ್ಲಿ ಮಾತುಕತೆ ನಡೆಯಲಿದೆ ಎಂದು ಟ್ರಂಪ್ ಹೇಳಿದ್ದು, “ನಾವು ತುಂಬಾ ನ್ಯಾಯಯುತ ಮತ್ತು ಸಮಂಜಸವಾದ ಒಪ್ಪಂದವನ್ನು ನೀಡುತ್ತಿದ್ದೇವೆ. ಅವರು ಅದನ್ನು ಸ್ವೀಕರಿಸುವುದು ಉತ್ತಮ. ಇಲ್ಲದಿದ್ದರೆ ಅಮೆರಿಕ ಇರಾನ್ನ ಎಲ್ಲಾ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ನಾಶ ಮಾಡುತ್ತದೆ” ಎಂದು ಎಚ್ಚರಿಸಿದ್ದಾರೆ.
ಇರಾನ್ ಈ ಘಟನೆಯನ್ನು “ಸಶಸ್ತ್ರ ಕಡಲ್ಗಳ್ಳತನ” ಎಂದು ಖಂಡಿಸಿದ್ದು, ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಈಗಾಗಲೇ ಎಚ್ಚರಿಕೆ ನೀಡಿದೆ. ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಆತಂಕ ಎದುರಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…