ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು ಇರಾನ್ ಸ್ವೀಕರಿಸದಿದ್ದರೆ, ಇರಾನ್ನ ಪ್ರತಿ ವಿದ್ಯುತ್ ಸ್ಥಾವರ ಮತ್ತು ಪ್ರತಿ ಸೇತುವೆಯನ್ನು ನಾಶ ಮಾಡುತ್ತೇವೆ” ಎಂದು ಹೇಳಿದ್ದಾರೆ.
ಇರಾನ್ ನಿನ್ನೆ ಹೊರ್ಮುಜ್ ಜಲಸಂಧಿಯಲ್ಲಿ ಗುಂಡಿನ ದಾಳಿ ನಡೆಸಲು ನಿರ್ಧರಿಸಿದೆ. ಇದು ಕದನ ವಿರಾಮವಾಗಿದೆ ಎಂದು ಟ್ರಂಪ್ ಇರಾನ್ ಮೇಲೆ ಆಪಾದನೆ ಮಾಡಿದ್ದಾರೆ.
ಅಮೆರಿಕ ಇನ್ನು ಮುಂದೆ ಇರಾನ್ನೊಂದಿಗೆ ಸೌಜನ್ಯದಿಂದ ವರ್ತಿಸುವುದಿಲ್ಲ. ಇದು ಇರಾನ್ಗೆ ಸ್ಪಷ್ಟ ಎಚ್ಚರಿಕೆ ಎಂದಿದ್ದಾರೆ. ಅಮೆರಿಕದ ನೌಕಾ ನಿರ್ಬಂಧವನ್ನು ಉಲ್ಲಂಘಿಸಲು ಪ್ರಯತ್ನಿಸಿದ ಹಡಗಿಗೆ ಮೊದಲು ಹಲವು ಎಚ್ಚರಿಕೆ ನೀಡಲಾಗಿತ್ತು. ಆದರೆ ಇರಾನ್ ಸಿಬ್ಬಂದಿ ಕೇಳದಿದ್ದ ಕಾರಣ, ಯುಎಸ್ಎಸ್ ಸ್ಪ್ರುಯನ್ಸ್ ನೌಕೆಯು ಹಡಗಿನ ಎಂಜಿನ್ ರೂಮ್ಗೆ ಗುಂಡು ಹಾರಿಸಿ ನಿಷ್ಕ್ರಿಯಗೊಳಿಸಿ, ನಂತರ ಮರೀನ್ಗಳು ಹಡಗನ್ನು ಪೂರ್ಣ ವಶಪಡಿಸಿಕೊಂಡರು ಎಂದು ಟ್ರಂಪ್ ತಿಳಿಸಿದ್ದಾರೆ.
ಅಮೆರಿಕ-ಇರಾನ್ ನಡುವೆ ಈ ವಾರ ಪಾಕಿಸ್ತಾನದಲ್ಲಿ ಮಾತುಕತೆ ನಡೆಯಲಿದೆ ಎಂದು ಟ್ರಂಪ್ ಹೇಳಿದ್ದು, “ನಾವು ತುಂಬಾ ನ್ಯಾಯಯುತ ಮತ್ತು ಸಮಂಜಸವಾದ ಒಪ್ಪಂದವನ್ನು ನೀಡುತ್ತಿದ್ದೇವೆ. ಅವರು ಅದನ್ನು ಸ್ವೀಕರಿಸುವುದು ಉತ್ತಮ. ಇಲ್ಲದಿದ್ದರೆ ಅಮೆರಿಕ ಇರಾನ್ನ ಎಲ್ಲಾ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ನಾಶ ಮಾಡುತ್ತದೆ” ಎಂದು ಎಚ್ಚರಿಸಿದ್ದಾರೆ.
ಇರಾನ್ ಈ ಘಟನೆಯನ್ನು “ಸಶಸ್ತ್ರ ಕಡಲ್ಗಳ್ಳತನ” ಎಂದು ಖಂಡಿಸಿದ್ದು, ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಈಗಾಗಲೇ ಎಚ್ಚರಿಕೆ ನೀಡಿದೆ. ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಆತಂಕ ಎದುರಾಗಿದೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…