ದೇಶ- ವಿದೇಶ

ಇನ್ನು ಮುಂದೆ ಸೌಜನ್ಯದಿಂದ ವರ್ತಿಸುವುದಿಲ್ಲ ; ಇರಾನ್‌ಗೆ ಟ್ರಂಪ್‌ನ ಕಠಿಣ ಎಚ್ಚರಿಕೆ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು ಇರಾನ್ ಸ್ವೀಕರಿಸದಿದ್ದರೆ, ಇರಾನ್‌ನ ಪ್ರತಿ ವಿದ್ಯುತ್ ಸ್ಥಾವರ ಮತ್ತು ಪ್ರತಿ ಸೇತುವೆಯನ್ನು ನಾಶ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಇರಾನ್‌ ನಿನ್ನೆ ಹೊರ್ಮುಜ್‌ ಜಲಸಂಧಿಯಲ್ಲಿ ಗುಂಡಿನ ದಾಳಿ ನಡೆಸಲು ನಿರ್ಧರಿಸಿದೆ. ಇದು ಕದನ ವಿರಾಮವಾಗಿದೆ ಎಂದು ಟ್ರಂಪ್‌ ಇರಾನ್‌ ಮೇಲೆ ಆಪಾದನೆ ಮಾಡಿದ್ದಾರೆ.

ಅಮೆರಿಕ ಇನ್ನು ಮುಂದೆ ಇರಾನ್‌ನೊಂದಿಗೆ ಸೌಜನ್ಯದಿಂದ ವರ್ತಿಸುವುದಿಲ್ಲ. ಇದು ಇರಾನ್‌ಗೆ ಸ್ಪಷ್ಟ ಎಚ್ಚರಿಕೆ ಎಂದಿದ್ದಾರೆ. ಅಮೆರಿಕದ ನೌಕಾ ನಿರ್ಬಂಧವನ್ನು ಉಲ್ಲಂಘಿಸಲು ಪ್ರಯತ್ನಿಸಿದ ಹಡಗಿಗೆ ಮೊದಲು ಹಲವು ಎಚ್ಚರಿಕೆ ನೀಡಲಾಗಿತ್ತು. ಆದರೆ ಇರಾನ್ ಸಿಬ್ಬಂದಿ ಕೇಳದಿದ್ದ ಕಾರಣ, ಯುಎಸ್‌ಎಸ್ ಸ್ಪ್ರುಯನ್ಸ್ ನೌಕೆಯು ಹಡಗಿನ ಎಂಜಿನ್ ರೂಮ್‌ಗೆ ಗುಂಡು ಹಾರಿಸಿ ನಿಷ್ಕ್ರಿಯಗೊಳಿಸಿ, ನಂತರ ಮರೀನ್‌ಗಳು ಹಡಗನ್ನು ಪೂರ್ಣ ವಶಪಡಿಸಿಕೊಂಡರು ಎಂದು ಟ್ರಂಪ್ ತಿಳಿಸಿದ್ದಾರೆ.

ಅಮೆರಿಕ-ಇರಾನ್ ನಡುವೆ ಈ ವಾರ ಪಾಕಿಸ್ತಾನದಲ್ಲಿ ಮಾತುಕತೆ ನಡೆಯಲಿದೆ ಎಂದು ಟ್ರಂಪ್ ಹೇಳಿದ್ದು, “ನಾವು ತುಂಬಾ ನ್ಯಾಯಯುತ ಮತ್ತು ಸಮಂಜಸವಾದ ಒಪ್ಪಂದವನ್ನು ನೀಡುತ್ತಿದ್ದೇವೆ. ಅವರು ಅದನ್ನು ಸ್ವೀಕರಿಸುವುದು ಉತ್ತಮ. ಇಲ್ಲದಿದ್ದರೆ ಅಮೆರಿಕ ಇರಾನ್‌ನ ಎಲ್ಲಾ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ನಾಶ ಮಾಡುತ್ತದೆ” ಎಂದು ಎಚ್ಚರಿಸಿದ್ದಾರೆ.

ಇರಾನ್ ಈ ಘಟನೆಯನ್ನು “ಸಶಸ್ತ್ರ ಕಡಲ್ಗಳ್ಳತನ” ಎಂದು ಖಂಡಿಸಿದ್ದು, ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಈಗಾಗಲೇ ಎಚ್ಚರಿಕೆ ನೀಡಿದೆ. ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಆತಂಕ ಎದುರಾಗಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago