ನವದೆಹಲಿ: ಜುಲೈ.1ರ ಸೋಮವಾರದಂದು ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಅವರು ನೇಮಕಗೊಂಡ ಮೊದಲ ದಿನವೇ ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಹರಿಹಾಯ್ದಿದ್ದರು.
ತಮ್ಮ ಭಾಷಣದಲ್ಲಿ ಬಿಜೆಪಿ ಹಾಗೂ ಆರ್ಎಸ್ಎಸ್ ದೇಶದಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಹರಡುತ್ತಿದೆ ಎಂದು ಕಿಡಿಕಾರಿದ್ದರು. ಹಿಂದೂ ಧರ್ಮದಲ್ಲಿರುವವರು ಹಿಂಸೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ಭಾಷಣದ ಮದ್ಯೆ ಪ್ರವೇಶ ಮಾಡಿದ ಮೋದಿ, ಇಡೀ ಹಿಂದೂ ಸಮುದಾಯವನ್ನು ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಸ್ಥಳದಲ್ಲೇ ಪ್ರತಿಕ್ರಿಯೆ ನೀಡಿದ್ದ ರಾಗಾ ನರೇಂದ್ರ ಮೋದಿ ಆಗಲಿ, ಆರ್ಎಸ್ಎಸ್ ಆಗಲಿ ಹಿಂದೂ ಧರ್ಮದ ಪ್ರತಿನಿಧಿಯಲ್ಲ ಎಂದು ಟಾಂಗ್ ಕೊಟ್ಟಿದ್ದರು.
ಇಂದು (ಜುಲೈ.2) ರಾಹುಲ್ ಗಾಂಧಿ ಅವರ ಭಾಷಣದ ಅನೇಕ ಭಾಗಗಳಿಗೆ ಲೋಕಸಭಾ ಕಡತಗಳಿಂದ ತೆಗೆದುಹಾಕಿರುವ ಬಗ್ಗೆ ಪ್ರತಿಕ್ರಿಯೆಯನ್ನು ರಾಹಲ್ ಗಾಂಧಿ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ಹೇಳಬೇಕಾಗಿರುವುದನ್ನು ಹೇಳಿದ್ದೇನೆ. ನಾನು ಹೇಳಿರುವುದು ಸತ್ಯ. ಮೋದಿ ಅವರು ಅವರ ಜಗತ್ತಿನಲ್ಲಿ ಸತ್ಯವನ್ನು ಹೊರಹಾಕಬಹುದು ಆದರೆ ವಾಸ್ತವದಲ್ಲಲ್ಲ. ಸತ್ಯ ಯಾವತ್ತೂ ಜಯಿಸುತ್ತದೆ ಎಂದು ರಾಗಾ ಹೇಳಿದ್ದಾರೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…