ನವದೆಹಲಿ: ಜುಲೈ.1ರ ಸೋಮವಾರದಂದು ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಅವರು ನೇಮಕಗೊಂಡ ಮೊದಲ ದಿನವೇ ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಹರಿಹಾಯ್ದಿದ್ದರು.
ತಮ್ಮ ಭಾಷಣದಲ್ಲಿ ಬಿಜೆಪಿ ಹಾಗೂ ಆರ್ಎಸ್ಎಸ್ ದೇಶದಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಹರಡುತ್ತಿದೆ ಎಂದು ಕಿಡಿಕಾರಿದ್ದರು. ಹಿಂದೂ ಧರ್ಮದಲ್ಲಿರುವವರು ಹಿಂಸೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ಭಾಷಣದ ಮದ್ಯೆ ಪ್ರವೇಶ ಮಾಡಿದ ಮೋದಿ, ಇಡೀ ಹಿಂದೂ ಸಮುದಾಯವನ್ನು ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಸ್ಥಳದಲ್ಲೇ ಪ್ರತಿಕ್ರಿಯೆ ನೀಡಿದ್ದ ರಾಗಾ ನರೇಂದ್ರ ಮೋದಿ ಆಗಲಿ, ಆರ್ಎಸ್ಎಸ್ ಆಗಲಿ ಹಿಂದೂ ಧರ್ಮದ ಪ್ರತಿನಿಧಿಯಲ್ಲ ಎಂದು ಟಾಂಗ್ ಕೊಟ್ಟಿದ್ದರು.
ಇಂದು (ಜುಲೈ.2) ರಾಹುಲ್ ಗಾಂಧಿ ಅವರ ಭಾಷಣದ ಅನೇಕ ಭಾಗಗಳಿಗೆ ಲೋಕಸಭಾ ಕಡತಗಳಿಂದ ತೆಗೆದುಹಾಕಿರುವ ಬಗ್ಗೆ ಪ್ರತಿಕ್ರಿಯೆಯನ್ನು ರಾಹಲ್ ಗಾಂಧಿ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ಹೇಳಬೇಕಾಗಿರುವುದನ್ನು ಹೇಳಿದ್ದೇನೆ. ನಾನು ಹೇಳಿರುವುದು ಸತ್ಯ. ಮೋದಿ ಅವರು ಅವರ ಜಗತ್ತಿನಲ್ಲಿ ಸತ್ಯವನ್ನು ಹೊರಹಾಕಬಹುದು ಆದರೆ ವಾಸ್ತವದಲ್ಲಲ್ಲ. ಸತ್ಯ ಯಾವತ್ತೂ ಜಯಿಸುತ್ತದೆ ಎಂದು ರಾಗಾ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…