ನವದೆಹಲಿ: ಜುಲೈ.1ರ ಸೋಮವಾರದಂದು ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಅವರು ನೇಮಕಗೊಂಡ ಮೊದಲ ದಿನವೇ ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಹರಿಹಾಯ್ದಿದ್ದರು.
ತಮ್ಮ ಭಾಷಣದಲ್ಲಿ ಬಿಜೆಪಿ ಹಾಗೂ ಆರ್ಎಸ್ಎಸ್ ದೇಶದಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಹರಡುತ್ತಿದೆ ಎಂದು ಕಿಡಿಕಾರಿದ್ದರು. ಹಿಂದೂ ಧರ್ಮದಲ್ಲಿರುವವರು ಹಿಂಸೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ಭಾಷಣದ ಮದ್ಯೆ ಪ್ರವೇಶ ಮಾಡಿದ ಮೋದಿ, ಇಡೀ ಹಿಂದೂ ಸಮುದಾಯವನ್ನು ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಸ್ಥಳದಲ್ಲೇ ಪ್ರತಿಕ್ರಿಯೆ ನೀಡಿದ್ದ ರಾಗಾ ನರೇಂದ್ರ ಮೋದಿ ಆಗಲಿ, ಆರ್ಎಸ್ಎಸ್ ಆಗಲಿ ಹಿಂದೂ ಧರ್ಮದ ಪ್ರತಿನಿಧಿಯಲ್ಲ ಎಂದು ಟಾಂಗ್ ಕೊಟ್ಟಿದ್ದರು.
ಇಂದು (ಜುಲೈ.2) ರಾಹುಲ್ ಗಾಂಧಿ ಅವರ ಭಾಷಣದ ಅನೇಕ ಭಾಗಗಳಿಗೆ ಲೋಕಸಭಾ ಕಡತಗಳಿಂದ ತೆಗೆದುಹಾಕಿರುವ ಬಗ್ಗೆ ಪ್ರತಿಕ್ರಿಯೆಯನ್ನು ರಾಹಲ್ ಗಾಂಧಿ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ಹೇಳಬೇಕಾಗಿರುವುದನ್ನು ಹೇಳಿದ್ದೇನೆ. ನಾನು ಹೇಳಿರುವುದು ಸತ್ಯ. ಮೋದಿ ಅವರು ಅವರ ಜಗತ್ತಿನಲ್ಲಿ ಸತ್ಯವನ್ನು ಹೊರಹಾಕಬಹುದು ಆದರೆ ವಾಸ್ತವದಲ್ಲಲ್ಲ. ಸತ್ಯ ಯಾವತ್ತೂ ಜಯಿಸುತ್ತದೆ ಎಂದು ರಾಗಾ ಹೇಳಿದ್ದಾರೆ.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…