ದೇಶ- ವಿದೇಶ

ತಿರುಪತಿಯ ಈ ಉಡುಗೊರೆಗಳನ್ನು ನೀವೂ ಖರೀದಿಸಬಹುದು!

ಆಂಧ್ರಪ್ರದೇಶ: ತಿರುಮಲ ವೆಂಕಟೇಶ್ವರ ದೇವಸ್ಥಾನ ಹಾಗೂ ಸಂಯೋಜಿತ ದೇವಸ್ಥಾನಗಳಲ್ಲಿ ಸ್ಥಾಪಿಸಲಾದ ಹುಂಡಿಗಳಿಗೆ ಹಾಕಿರುವ ವಾಚ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ತಿರುಮಲ ತಿರುಪತಿ ದೇವಸ್ಥಾನವು ಹರಾಜು ಮಾಡಲು ಮುಂದಾಗಿದೆ.

ಕಲಿಯುಗದ ಪ್ರತ್ಯಕ್ಷ ದೈವ ತಿರುಪತಿಯ ವೆಂಕಟೇಶ್ವರ ಸ್ವಾಮಿಯನ್ನು ಪ್ರತಿನಿತ್ಯ ಸಾವಿರಾರು ಮಂದಿ ದರ್ಶನ ಪಡೆದುಕೊಳ್ಳುತ್ತಾರೆ. ಕೆಲವರು ಕಾಲ್ನಡಿಗೆ ಮೂಲಕ ದರ್ಶನಕ್ಕೆ ಆಗಮಿಸಿದರೆ, ಮತ್ತೆ ಕೆಲವರು ತಮ್ಮ ಸ್ವಂತ ವಾಹನದ ಮೂಲಕ ತಿರುಪತಿಗೆ ಬಂದು ವೆಂಕಟೇಶ್ವರನ ದರ್ಶನ ಮಾಡುತ್ತಾರೆ.

ತಿರುಪತಿಗೆ ಆಗಮಿಸುವ ಸಾವಿರಾರು ಮಂದಿ ದೇವಾಲಯದ ಹುಂಡಿಗೆ ಕಾಣಿಕೆ ಜೊತೆ ಜೊತೆಗೆ ವಾಚ್ ಹಾಗೂ ಸ್ಮಾರ್ಟ್‌ಫೋನ್ ಹಾಕಿ ಹರಕೆ ತೀರಿಸುತ್ತಾರೆ. ಭಕ್ತರು ಕಾಣಿಕೆಗಳ ರೂಪದಲ್ಲಿ ಹಾಕಿರುವ ವಾಚ್ ಹಾಗೂ ಸ್ಮಾರ್ಟ್‌ಫೋನ್‌ಗಳನ್ನು ಈಗ ಟಿಟಿಡಿ ಹರಾಜು ಹಾಕುತ್ತಿದೆ. ಈ ಮೂಲಕ ಇವುಗಳನ್ನು ಖರೀದಿ ಮಾಡಬೇಕು ಎನ್ನುವವರಿಗೆ ಸುವರ್ಣಾವಕಾಶ ಸಿಕ್ಕಿದೆ.

14 ಹೊಸ ಹಾಗೂ ಬಳಸಿದ ವಾಚ್‌ಗಳ ಲಾಟ್‌ಗಳ ಜೊತೆಗೆ 24 ಸೆಲ್‌ಫೋನ್‌ಗ ಲಾಟ್‌ಗಳನ್ನು ಹರಾಜಿಗೆ ಇಡಲಾಗಿದೆ. ಆಸಕ್ತರು ಈ ಹರಾಜಿನಲ್ಲಿ ಭಾಗವಹಿಸಿ ಇವುಗಳನ್ನು ಕೊಂಡುಕೊಳ್ಳಬಹುದು ಎಂದು ಟಿಟಿಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಹರಾಜು ಪ್ರಕ್ರಿಯೆ ಜೂನ್ 24ರಂದು ನಡೆಯಲಿದ್ದು, ನೀವು ಕೂಡ ತಿರುಪತಿಗೆ ಹೋಗಿ ಸೂಕ್ತ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಹಾಗೂ ವಾಚ್‌ಗಳನ್ನು ಖರೀದಿ ಮಾಡಬಹುದಾಗಿದೆ.

andolana

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

2 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

2 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

3 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

3 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

3 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

3 hours ago