ಆಂಧ್ರಪ್ರದೇಶ: ತಿರುಮಲ ವೆಂಕಟೇಶ್ವರ ದೇವಸ್ಥಾನ ಹಾಗೂ ಸಂಯೋಜಿತ ದೇವಸ್ಥಾನಗಳಲ್ಲಿ ಸ್ಥಾಪಿಸಲಾದ ಹುಂಡಿಗಳಿಗೆ ಹಾಕಿರುವ ವಾಚ್ಗಳು ಮತ್ತು ಮೊಬೈಲ್ ಫೋನ್ಗಳನ್ನು ತಿರುಮಲ ತಿರುಪತಿ ದೇವಸ್ಥಾನವು ಹರಾಜು ಮಾಡಲು ಮುಂದಾಗಿದೆ.
ಕಲಿಯುಗದ ಪ್ರತ್ಯಕ್ಷ ದೈವ ತಿರುಪತಿಯ ವೆಂಕಟೇಶ್ವರ ಸ್ವಾಮಿಯನ್ನು ಪ್ರತಿನಿತ್ಯ ಸಾವಿರಾರು ಮಂದಿ ದರ್ಶನ ಪಡೆದುಕೊಳ್ಳುತ್ತಾರೆ. ಕೆಲವರು ಕಾಲ್ನಡಿಗೆ ಮೂಲಕ ದರ್ಶನಕ್ಕೆ ಆಗಮಿಸಿದರೆ, ಮತ್ತೆ ಕೆಲವರು ತಮ್ಮ ಸ್ವಂತ ವಾಹನದ ಮೂಲಕ ತಿರುಪತಿಗೆ ಬಂದು ವೆಂಕಟೇಶ್ವರನ ದರ್ಶನ ಮಾಡುತ್ತಾರೆ.
ತಿರುಪತಿಗೆ ಆಗಮಿಸುವ ಸಾವಿರಾರು ಮಂದಿ ದೇವಾಲಯದ ಹುಂಡಿಗೆ ಕಾಣಿಕೆ ಜೊತೆ ಜೊತೆಗೆ ವಾಚ್ ಹಾಗೂ ಸ್ಮಾರ್ಟ್ಫೋನ್ ಹಾಕಿ ಹರಕೆ ತೀರಿಸುತ್ತಾರೆ. ಭಕ್ತರು ಕಾಣಿಕೆಗಳ ರೂಪದಲ್ಲಿ ಹಾಕಿರುವ ವಾಚ್ ಹಾಗೂ ಸ್ಮಾರ್ಟ್ಫೋನ್ಗಳನ್ನು ಈಗ ಟಿಟಿಡಿ ಹರಾಜು ಹಾಕುತ್ತಿದೆ. ಈ ಮೂಲಕ ಇವುಗಳನ್ನು ಖರೀದಿ ಮಾಡಬೇಕು ಎನ್ನುವವರಿಗೆ ಸುವರ್ಣಾವಕಾಶ ಸಿಕ್ಕಿದೆ.
14 ಹೊಸ ಹಾಗೂ ಬಳಸಿದ ವಾಚ್ಗಳ ಲಾಟ್ಗಳ ಜೊತೆಗೆ 24 ಸೆಲ್ಫೋನ್ಗ ಲಾಟ್ಗಳನ್ನು ಹರಾಜಿಗೆ ಇಡಲಾಗಿದೆ. ಆಸಕ್ತರು ಈ ಹರಾಜಿನಲ್ಲಿ ಭಾಗವಹಿಸಿ ಇವುಗಳನ್ನು ಕೊಂಡುಕೊಳ್ಳಬಹುದು ಎಂದು ಟಿಟಿಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಹರಾಜು ಪ್ರಕ್ರಿಯೆ ಜೂನ್ 24ರಂದು ನಡೆಯಲಿದ್ದು, ನೀವು ಕೂಡ ತಿರುಪತಿಗೆ ಹೋಗಿ ಸೂಕ್ತ ಬೆಲೆಯಲ್ಲಿ ಸ್ಮಾರ್ಟ್ಫೋನ್ ಹಾಗೂ ವಾಚ್ಗಳನ್ನು ಖರೀದಿ ಮಾಡಬಹುದಾಗಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…