ದೇಶ- ವಿದೇಶ

ತಿರುಪತಿಯ ಈ ಉಡುಗೊರೆಗಳನ್ನು ನೀವೂ ಖರೀದಿಸಬಹುದು!

ಆಂಧ್ರಪ್ರದೇಶ: ತಿರುಮಲ ವೆಂಕಟೇಶ್ವರ ದೇವಸ್ಥಾನ ಹಾಗೂ ಸಂಯೋಜಿತ ದೇವಸ್ಥಾನಗಳಲ್ಲಿ ಸ್ಥಾಪಿಸಲಾದ ಹುಂಡಿಗಳಿಗೆ ಹಾಕಿರುವ ವಾಚ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ತಿರುಮಲ ತಿರುಪತಿ ದೇವಸ್ಥಾನವು ಹರಾಜು ಮಾಡಲು ಮುಂದಾಗಿದೆ.

ಕಲಿಯುಗದ ಪ್ರತ್ಯಕ್ಷ ದೈವ ತಿರುಪತಿಯ ವೆಂಕಟೇಶ್ವರ ಸ್ವಾಮಿಯನ್ನು ಪ್ರತಿನಿತ್ಯ ಸಾವಿರಾರು ಮಂದಿ ದರ್ಶನ ಪಡೆದುಕೊಳ್ಳುತ್ತಾರೆ. ಕೆಲವರು ಕಾಲ್ನಡಿಗೆ ಮೂಲಕ ದರ್ಶನಕ್ಕೆ ಆಗಮಿಸಿದರೆ, ಮತ್ತೆ ಕೆಲವರು ತಮ್ಮ ಸ್ವಂತ ವಾಹನದ ಮೂಲಕ ತಿರುಪತಿಗೆ ಬಂದು ವೆಂಕಟೇಶ್ವರನ ದರ್ಶನ ಮಾಡುತ್ತಾರೆ.

ತಿರುಪತಿಗೆ ಆಗಮಿಸುವ ಸಾವಿರಾರು ಮಂದಿ ದೇವಾಲಯದ ಹುಂಡಿಗೆ ಕಾಣಿಕೆ ಜೊತೆ ಜೊತೆಗೆ ವಾಚ್ ಹಾಗೂ ಸ್ಮಾರ್ಟ್‌ಫೋನ್ ಹಾಕಿ ಹರಕೆ ತೀರಿಸುತ್ತಾರೆ. ಭಕ್ತರು ಕಾಣಿಕೆಗಳ ರೂಪದಲ್ಲಿ ಹಾಕಿರುವ ವಾಚ್ ಹಾಗೂ ಸ್ಮಾರ್ಟ್‌ಫೋನ್‌ಗಳನ್ನು ಈಗ ಟಿಟಿಡಿ ಹರಾಜು ಹಾಕುತ್ತಿದೆ. ಈ ಮೂಲಕ ಇವುಗಳನ್ನು ಖರೀದಿ ಮಾಡಬೇಕು ಎನ್ನುವವರಿಗೆ ಸುವರ್ಣಾವಕಾಶ ಸಿಕ್ಕಿದೆ.

14 ಹೊಸ ಹಾಗೂ ಬಳಸಿದ ವಾಚ್‌ಗಳ ಲಾಟ್‌ಗಳ ಜೊತೆಗೆ 24 ಸೆಲ್‌ಫೋನ್‌ಗ ಲಾಟ್‌ಗಳನ್ನು ಹರಾಜಿಗೆ ಇಡಲಾಗಿದೆ. ಆಸಕ್ತರು ಈ ಹರಾಜಿನಲ್ಲಿ ಭಾಗವಹಿಸಿ ಇವುಗಳನ್ನು ಕೊಂಡುಕೊಳ್ಳಬಹುದು ಎಂದು ಟಿಟಿಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಹರಾಜು ಪ್ರಕ್ರಿಯೆ ಜೂನ್ 24ರಂದು ನಡೆಯಲಿದ್ದು, ನೀವು ಕೂಡ ತಿರುಪತಿಗೆ ಹೋಗಿ ಸೂಕ್ತ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಹಾಗೂ ವಾಚ್‌ಗಳನ್ನು ಖರೀದಿ ಮಾಡಬಹುದಾಗಿದೆ.

andolana

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

14 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

15 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

16 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

16 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

17 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

18 hours ago