ದೇಶ- ವಿದೇಶ

ಸೆಬಿ ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ನೇಮಕ

ನವದೆಹಲಿ: 3 ವರ್ಷಗಳ ಅವಧಿಗೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (SEBI) ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ ಹಣಕಾಸು ಕಾರ್ಯದರ್ಶೀ ಪಾಂಡೆ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಅದೇಶ ಹೊರಡಿಸಿದೆ.

ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ ಹಾಲಿ ಮುಖ್ಯಸ್ಥರಾಗಿರುವ ಮಾಧಬಿ ಪುರಿ ಬುಚ್‌ ಅವರ ಅಧಿಕಾರವದಿ ಮಾ.1ರಂದು ಕೊನೆಗೊಳ್ಳಲಿದೆ. ಇವರು 2022ರ ಮಾ.2ರಂದು ಸೆಬಿಯ ಮೊದಲ ಮಹಿಳಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪಾಂಡೆ ಅವರು ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಸಾರ್ವಜನಿಕ ಉದ್ಯಮಗಳ ಇಲಾಖೆ(DPE), ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ (DIPAM)ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಹಣಕಾಸು ಕಾರ್ಯದರ್ಶಿಯಾಗುವ ಮೊದಲು ತುಹಿನ್‌ ಪಾಂಡೆ ಅವರು ಅನೇಖ ಇಲಾಖೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2025ರ ಆರಂಭದಲ್ಲಿ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ…

30 mins ago

ಓದುಗರ ಪತ್ರ: ಬಸ್ ನಿರ್ವಾಹಕರು ಸೌಜನ್ಯದಿಂದ ವರ್ತಿಸಬೇಕು

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇತ್ತೀಚೆಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದು ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಈ ಕಾರಣದಿಂದ…

31 mins ago

ಓದುಗರ ಪತ್ರ:  ಆಸ್ಪತ್ರೆ: ಭರವಸೆಗಿಂತಲೂ ಭಯವೇ ಜಾಸ್ತಿ

ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ. ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ…

33 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಜೈಲೇ ಮೊದಲ ಪಾಠ ಶಾಲೆ! ಕೊಲೆ ಆರೋಪಿಯೇ ಪ್ರಥಮ ಗುರು!

ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…

54 mins ago

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

4 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

4 hours ago