ದೇಶ- ವಿದೇಶ

ಟರ್ಕಿ, ಸಿರಿಯಾ ಭೂಕಂಪ; ಅವಶೇಷಗಳಡಿ ಸಿಲುಕಿದ ಜನ : ಮೃತರ ಸಂಖ್ಯೆ 7926ಕ್ಕೆ ಏರಿಕೆ

* ಟರ್ಕಿ ಗಡಿಯಲ್ಲಿ 6,000 ಕಟ್ಟಡಗಳು ನೆಲಸಮ
* ಹತ್ತು ಪ್ರಾಂತ್ಯಗಳಲ್ಲಿ 3 ತಿಂಗಳು ತುರ್ತುಸ್ಥಿತಿ
* ಭಾರತದಿಂದ ಪರಿಹಾರ ಸಾಮಗ್ರಿಗಳ ರವಾನೆ

ಅದಾನಾ/ಅಂಕಾರಾ: ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಿಂದ ಸಾವಿನ ಸಂಖ್ಯೆ 8,000 ಸಾವಿರ ದಾಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಉಭಯ ದೇಶಗಳಲ್ಲಿ ಸಾವು-ನೋವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಐಎಎನ್‌ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಉಭಯ ರಾಷ್ಟ್ರಗಳಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಯವರೆಗೆ ಒಟ್ಟು 7926  ಮಂದಿ ಮೃತಪಟ್ಟಿದ್ದಾರೆ. ಕಟ್ಟಡಗಳ ಅವಶೇಷಗಳಡಿ ಸಿಲುಕಿದವರ ರಕ್ಷಣೆಗಾಗಿ ತ್ವರಿತ ಕಾರ್ಯಆಚರಣೆ  ಮುಂದುವರಿದಿದೆ. ಟರ್ಕಿಯಲ್ಲಿ ಇಲ್ಲಿಯವರೆಗೂ 5,894 ಜನರು ಮೃತಪಟ್ಟಿದ್ದಾರೆ, 34,810 ಜನರು ಗಾಯಗೊಂಡಿದ್ದಾರೆ ಎಂದು ಟರ್ಕಿ ಉಪಾಧ್ಯಕ್ಷ ಮಾಹಿತಿ ನೀಡಿದ್ದಾರೆ.
ಸಿರಿಯಾದಲ್ಲಿ ಸಾವಿನ ಸಂಖ್ಯೆ 2,032ಕ್ಕೆ ಏರಿಕೆಯಾಗಿದೆ. 2600ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸಿರಿಯಾ ಅಧಿಕಾರಿಗಳು ಹೇಳಿದ್ದಾರೆ. ಅಸ್ಥಿರ ಕಟ್ಟಡಗಳು ಮತ್ತು ಕೊರೆಯುವ ಚಳಿ, ರಕ್ಷಣಾ ಕಾರ್ಯಕ್ಕೆ ಸವಾಲಾಗಿದೆ. ಉಭಯ ದೇಶಗಳಲ್ಲಿ 24,400 ಕ್ಕೂ ಹೆಚ್ಚು ತುರ್ತುಸೇವಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಸಿರಿಯಾದ ಅಲೆಪ್ಪೊ ಮತ್ತು ಹವಾ ನಗರ ಹಾಗೂ ಟರ್ಕಿಯ ದಿಯಾರ್ ಬಕೀರ್ವರೆಗೆ ಸಾವಿರಾರು ಕಟ್ಟಡಗಳು ಕುಸಿದಿವೆ. ಟರ್ಕಿಯಾ ಗಡಿ ಪ್ರದೇಶದಲ್ಲಿ ಸುಮಾರು 6 ಸಾವಿರ ಕಟ್ಟಡಗಳು ನೆಲಸಮವಾಗಿವೆ. ಆಗ್ನೇಯದ ಹತ್ತು ಪ್ರಾಂತ್ಯಗಳಲ್ಲಿ ಮೂರು ತಿಂಗಳ ಕಾಲ ತುರ್ತು ಸ್ಥಿತಿಯನ್ನು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಘೋಷಣೆ ಮಾಡಿದ್ದಾರೆ.
ಭಾರತ, ಅಮೆರಿಕ, ಬ್ರಿಟನ್ ಸೇರಿ ವಿಶ್ವದ ಹಲವು ರಾಷ್ಟ್ರಗಳು ಸಂತ್ರಸ್ತರ ನೆರವಿಗಾಗಿ ಔಷಧ, ಪರಿಹಾರ ಸಾಮಗ್ರಿ ಹಾಗೂ ವಿಪತ್ತು ಸ್ಪಂದನಾ ಪಡೆಗಳನ್ನು ಟರ್ಕಿಗೆ ಕಳುಹಿಸಿವೆ.


ಭಾರತದಿಂದ ನಾಲ್ಕು ವಿಮಾನ ಟರ್ಕಿಗೆ
ಹೊಸದಿಲ್ಲಿ: ಭೂಕಂಪ ಪೀಡಿತ ಟರ್ಕಿಗೆ ನೆರವಿನ ಹಸ್ತ ಚಾಚಿರುವ ಭಾರತ, ಅಗತ್ಯ ವೈದ್ಯಕೀಯ, ಪರಿಹಾರ ಸಾಮಗ್ರಿ ಸೇರಿದಂತೆ ಭಾರತೀಯ ವಾಯುಪಡೆಯ ಬೃಹತ್ ಗಾತ್ರದ ನಾಲ್ಕು ಸಿ-17 ಗ್ಲೋಬ್ಮಾಸ್ಟರ್ ಮಿಲಿಟರಿ ಸರಕು ಸಾಗಾಟದ ವಿಮಾನಗಳನ್ನು ಟರ್ಕಿಗೆ ರವಾನಿಸಿದೆ.
ಇದೇ ವೇಳೆ ಆರು ಟನ್ ಪರಿಹಾರ ಸಾಮಗ್ರಿಗಳನ್ನು ಹೊತ್ತ ಭಾರತೀಯ ವಾಯುಪಡೆಯ ಮತ್ತೊಂದು ಸಿ-130 ಜೆ ವಿಮಾನ ಸಿರಿಯಾಕ್ಕೆ ತೆರಳಿದೆ. ಭೂಕಂಪ ಸಂತ್ರಸ್ತರ ನೆರವಿಗೆ ಔಷಧಿ, ಪರಿಹಾರ ಸಾಮಗ್ರಿ, ಸಂಚಾರಿ ಆಸ್ಪತ್ರೆ ಹಾಗೂ ವಿಶೇಷ ರಕ್ಷಣಾ ಕಾರ್ಯಾಚರಣೆಯ ತಂಡವನ್ನು ಕಳುಹಿಸಲಾಗಿದೆ.
ಈ ಸಂಕಷ್ಟದ ಸಮಯದಲ್ಲಿ ಟರ್ಕಿ ಮತ್ತು ಸಿರಿಯಾದೊಂದಿಗೆ ಭಾರತ ಒಗ್ಗಟ್ಟನ್ನು ಪ್ರದರ್ಶಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ಪ್ರತ್ಯೇಕ ಟ್ವೀಟ್‌ಗಳಲ್ಲಿ ಬೆಂಬಲ ಸೂಚಿಸಿದ್ದಾರೆ.

andolanait

Recent Posts

ಮಂಡ್ಯ | ಜೈಲಿನಲ್ಲಿ ದುಡ್ಡು ಕೊಟ್ಟರೆ ರಾಜಾತಿಥ್ಯ ಆರೋಪ ; ಕಾರಾಗೃಹದ ಅದೀಕ್ಷಕಿ ವರ್ಗಾವಣೆ

ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್‌ಆರ್ ಮೊಹಮದ್ ಹುಸೇನ್‌ಗೆ ಅನಧಿಕೃತ…

6 hours ago

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…

7 hours ago

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ…

8 hours ago

ಮೈಸೂರು ದಸರಾ | ಸೆ.28 ರಿಂದ ಅ.5ರವರೆಗೆ ಯುವ ಸಂಭ್ರಮ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…

9 hours ago

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

14 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

15 hours ago