ದೇಶ- ವಿದೇಶ

ಟಿವಿಕೆ ಮಾನ್ಯತೆ ಪಡೆದ ಪಕ್ಷವಲ್ಲ : ಮದ್ರಾಸ್‌ ಕೋರ್ಟ್‌ಗೆ ಮಾಹಿತಿ ನೀಡಿದ ಇಸಿ

ಚೆನ್ನೈ : ಖ್ಯಾತ ತಮಿಳು ನಟ ಹಾಗೂ ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ ಎಂದು ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ.

ಟಿವಿಕೆ ಮಾನ್ಯತೆ ರದ್ದು ಕೋರಿ ಸಿ.ಸೆಲ್ವಕುಮಾರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ, ಚುನಾವಣಾ ಆಯೋಗದ ವಕೀಲ ನಿರಂಜನ್ ರಾಜಗೋಪಾಲ್ ಅವರು ಮುಖ್ಯ ನ್ಯಾಯಮೂರ್ತಿ ಎಂ.ಎಂ. ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರ ಪೀಠಕ್ಕೆ ಈ ವಿಷಯ ತಿಳಿಸಿದರು.

ಇದನ್ನು ಓದಿ: ಕಾಲ್ತುಳಿತ ದುರಂತಕ್ಕೆ ತಮಿಳುನಾಡು ಸರ್ಕಾರವೇ ಕಾರಣ: ನಟ ವಿಜಯ್‌ ಗಂಭೀರ ಆರೋಪ

ಸೆಪ್ಟೆಂಬರ್ 27 ರಂದು ಕರೂರಿನಲ್ಲಿ ಆಯೋಜಿಸಲಾಗಿದ್ದ ಪಕ್ಷದ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಟಿವಿಕೆಯ ಮಾನ್ಯತೆ ರದ್ದುಗೊಳಿಸುವಂತೆ ಕೋರಲಾಗಿತ್ತು. ಟಿವಿಕೆಯನ್ನು ಮಾನ್ಯತೆ ರದ್ದುಗೊಳಿಸುವ ಪ್ರಾರ್ಥನೆಗೆ ಸಂಬಂಧಿಸಿದಂತೆ, ಇಸಿ ಪರ ವಕೀಲರ ನಿರಂಜನ್ ರಾಜಗೋಪಾಲ್ ಅವರು, ಈ ಪಕ್ಷವು ಮಾನ್ಯತೆ ಪಡೆದ ಪಕ್ಷವಲ್ಲ. ಆದ್ದರಿಂದ ಈ ಅರ್ಜಿಗೆ ಯಾವುದೇ ಮಹತ್ವ ಇಲ್ಲ ಎಂದು ಹೇಳಿದರು.

ಮೂಲತಃ ಈ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಸಲ್ಲಿಸಲಾಗಿತ್ತು. ಆದರೆ ಅರ್ಜಿಯಲ್ಲಿ ಮೊದಲ ಪ್ರತಿವಾದಿ ಮುಖ್ಯ ಚುನಾವಣಾ ಆಯುಕ್ತರು(ಸಿಇಸಿ) ಆಗಿದ್ದರಿಂದ ಅದನ್ನು ಮದ್ರಾಸ್ ಹೈಕೋರ್ಟ್ ನ ಮೊದಲ ಪೀಠದ ಮುಂದೆ ಪಟ್ಟಿ ಮಾಡಲಾಯಿತು.

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago