ದೇಶ- ವಿದೇಶ

ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌: ಏನದು ಗೊತ್ತಾ?

ತಿರುವನಂತಪುರಂ: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳದ ಕಮ್ಯುನಿಸ್ಟ್ ಪಕ್ಷದ ಸಂಸದರೊಬ್ಬರ ಹೆಸರು ತಳಕು ಹಾಕಿಕೊಂಡಿದೆ.

ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸದಸ್ಯ ಸಂತೋಷ್‍ಕುಮಾರ್ ಅವರೇ ತಲೆಬುರುಡೆಯನ್ನು ಪ್ರಕರಣದ ಪ್ರಮುಖ ಆರೋಪಿ ಪ್ರಸ್ತುತ ಎಸ್‍ಐಟಿ ವಶದಲ್ಲಿರುವ ಚಿನ್ನಯ್ಯ ಅವರಿಗೆ ತಂದುಕೊಟ್ಟಿದ್ದರು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್.ಟಿ ಅವರು ತಿರುವಂತನಪುರಕ್ಕೆ ತೆರಳಿ ರಾಜ್ಯಸಭಾ ಸದಸ್ಯರೂ ಆಗಿರುವ ಸಂತೋಷ್‍ಕುಮಾರ್ ಅವರನ್ನು ಭೇಟಿಯಾಗಿ ತಲೆಬುರುಡೆ ಹಾಗ ಪ್ರಕರಣದ ಬಗ್ಗೆ ಯಾವ ಯಾವ ತಂತ್ರಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ರಹಸ್ಯ ಸ್ಥಳವೊಂದರಲ್ಲಿ ಚರ್ಚೆ ನಡೆಸಿದ್ದರು.

ಇದನ್ನು ಓದಿ:ಧರ್ಮಸ್ಥಳ ಪ್ರಕರಣ : ಮಹಿಳಾ ಸಂಘಟನೆಗಳಿಂದ ಸೋನಿಯಾಗೆ ಪತ್ರ

ಎಸ್‍ಐಟಿ ವಶದಲ್ಲಿರುವ ಚಿನ್ನಯ್ಯ ಹಾಗೂ ವಿಚಾರಣೆಗೆ ಹಾಜರಾಗಿದ್ದ ಗಿರೀಶ್ ಮಟ್ಟಣ್ಣನವರ್, ಜಯಂತ್, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿಚಾರಣೆ ವೇಳೆ ಈ ಪ್ರಕರಣದ ಮಾಸ್ಟರ್ ಮೈಂಡ್ ಸಂತೋಷ್‍ಕುಮಾರ್ ಎಂಬುದನ್ನು ಬಹಿರಂಗಪಡಿಸಿದ್ದಾರೆ.

ದೆಹಲಿಗೂ ತೆರಳಿದ್ದ ಈ ತಂಡವು ಸಂಸದರನ್ನು ಭೇಟಿಯಾಗಿ ಧರ್ಮಸ್ಥಳದಲ್ಲಿ ಕಳೆದ ಹಲವಾರು ವರ್ಷದಿಂದ ಶವಗಳನ್ನು ಹೂತು ಹಾಕಿದ್ದೇನೆ. ಈಗ ನನಗೆ ಇದರ ಪಾಪಪ್ರಜ್ಞೆ ಕಾಡುತ್ತಿದೆ. ಪೊಲೀಸರು ತನಿಖೆ ನಡೆಸಿದರೆ ಎಲ್ಲವನ್ನು ಬಾಯಿ ಬಿಡುವುದಾಗಿ ಹೇಳುವಂತೆ ಚಿನ್ನಯ್ಯನ ತಲೆಗೆ ತುಂಬಿದ್ದು ಈ ತಂಡ ಎಂಬುದು ಗೊತ್ತಾಗಿದೆ.

ಇದೀಗ ಎಸ್‍ಐಟಿ ಪ್ರಕರಣದ ಮಾಸ್ಟರ್ ಮೈಂಡ್ ಎಂದೇ ಆರೋಪಿಸಿರುವ ರಾಜ್ಯಸಭಾ ಸದಸ್ಯನಿಗೆ ನೋಟಿಸ್ ನೀಡಲು ಸಿದ್ದತೆ ನಡೆಸಿದೆ. ಒಂದು ವೇಳೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದರೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಳ್ಳುವುದರಲ್ಲಿ ಯಾವ ಸಂಶಯವೂ ಇಲ್ಲ.

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

4 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

6 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

7 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

7 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

7 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

7 hours ago