ದೇಶ- ವಿದೇಶ

ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌: ಏನದು ಗೊತ್ತಾ?

ತಿರುವನಂತಪುರಂ: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳದ ಕಮ್ಯುನಿಸ್ಟ್ ಪಕ್ಷದ ಸಂಸದರೊಬ್ಬರ ಹೆಸರು ತಳಕು ಹಾಕಿಕೊಂಡಿದೆ.

ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸದಸ್ಯ ಸಂತೋಷ್‍ಕುಮಾರ್ ಅವರೇ ತಲೆಬುರುಡೆಯನ್ನು ಪ್ರಕರಣದ ಪ್ರಮುಖ ಆರೋಪಿ ಪ್ರಸ್ತುತ ಎಸ್‍ಐಟಿ ವಶದಲ್ಲಿರುವ ಚಿನ್ನಯ್ಯ ಅವರಿಗೆ ತಂದುಕೊಟ್ಟಿದ್ದರು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್.ಟಿ ಅವರು ತಿರುವಂತನಪುರಕ್ಕೆ ತೆರಳಿ ರಾಜ್ಯಸಭಾ ಸದಸ್ಯರೂ ಆಗಿರುವ ಸಂತೋಷ್‍ಕುಮಾರ್ ಅವರನ್ನು ಭೇಟಿಯಾಗಿ ತಲೆಬುರುಡೆ ಹಾಗ ಪ್ರಕರಣದ ಬಗ್ಗೆ ಯಾವ ಯಾವ ತಂತ್ರಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ರಹಸ್ಯ ಸ್ಥಳವೊಂದರಲ್ಲಿ ಚರ್ಚೆ ನಡೆಸಿದ್ದರು.

ಇದನ್ನು ಓದಿ:ಧರ್ಮಸ್ಥಳ ಪ್ರಕರಣ : ಮಹಿಳಾ ಸಂಘಟನೆಗಳಿಂದ ಸೋನಿಯಾಗೆ ಪತ್ರ

ಎಸ್‍ಐಟಿ ವಶದಲ್ಲಿರುವ ಚಿನ್ನಯ್ಯ ಹಾಗೂ ವಿಚಾರಣೆಗೆ ಹಾಜರಾಗಿದ್ದ ಗಿರೀಶ್ ಮಟ್ಟಣ್ಣನವರ್, ಜಯಂತ್, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿಚಾರಣೆ ವೇಳೆ ಈ ಪ್ರಕರಣದ ಮಾಸ್ಟರ್ ಮೈಂಡ್ ಸಂತೋಷ್‍ಕುಮಾರ್ ಎಂಬುದನ್ನು ಬಹಿರಂಗಪಡಿಸಿದ್ದಾರೆ.

ದೆಹಲಿಗೂ ತೆರಳಿದ್ದ ಈ ತಂಡವು ಸಂಸದರನ್ನು ಭೇಟಿಯಾಗಿ ಧರ್ಮಸ್ಥಳದಲ್ಲಿ ಕಳೆದ ಹಲವಾರು ವರ್ಷದಿಂದ ಶವಗಳನ್ನು ಹೂತು ಹಾಕಿದ್ದೇನೆ. ಈಗ ನನಗೆ ಇದರ ಪಾಪಪ್ರಜ್ಞೆ ಕಾಡುತ್ತಿದೆ. ಪೊಲೀಸರು ತನಿಖೆ ನಡೆಸಿದರೆ ಎಲ್ಲವನ್ನು ಬಾಯಿ ಬಿಡುವುದಾಗಿ ಹೇಳುವಂತೆ ಚಿನ್ನಯ್ಯನ ತಲೆಗೆ ತುಂಬಿದ್ದು ಈ ತಂಡ ಎಂಬುದು ಗೊತ್ತಾಗಿದೆ.

ಇದೀಗ ಎಸ್‍ಐಟಿ ಪ್ರಕರಣದ ಮಾಸ್ಟರ್ ಮೈಂಡ್ ಎಂದೇ ಆರೋಪಿಸಿರುವ ರಾಜ್ಯಸಭಾ ಸದಸ್ಯನಿಗೆ ನೋಟಿಸ್ ನೀಡಲು ಸಿದ್ದತೆ ನಡೆಸಿದೆ. ಒಂದು ವೇಳೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದರೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಳ್ಳುವುದರಲ್ಲಿ ಯಾವ ಸಂಶಯವೂ ಇಲ್ಲ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago