ಮಧ್ಯಪ್ರದೇಶ: ಇಲ್ಲಿನ ಛಿಂದ್ವಾರ ಜಿಲ್ಲೆಯ ವಿಶೇಷ ಸಶಸ್ತ್ರ ಪಡೆಯ(ಎಸ್ಎಎಫ್) ಇಬ್ಬರು ಸಿಬ್ಬಂದಿ ಬಿಯರ್ ಸೇವೆನೆಯಿಂದ ಮೃತಪಟ್ಟಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ಎಸ್ಎಎಫ್ನ ೮ನೇ ಬೆಟಾಲಿಯನ್ ಪೊಲೀಸ್ ಸಿಬ್ಬಂದಿಗಳಾದ ದಾನಿರಾಮ್ ಉಯ್ಕೆ(೫೫), ಪ್ರೇಮಲಾಲ್ ಕಕೋಡಿಯಾ (೫೦) ಎಂಬುವವರೇ ಮೃತರು.
ದಾನಿರಾಮ್ ಹಾಗೂ ಪ್ರೇಮಲಾಲ್ ಇಬ್ಬರು ಒಟ್ಟಿಗೆ ಶನಿವಾರ(ಮೇ.25) ರಾತ್ರಿ ಬಿಯರ್ ಸೇವನೆ ಮಾಡಿದ್ದರು. ಸ್ಪಲ್ಪ ಸಮಯದ ಬಳಿಕ ವಾಂತಿ ಮಾಡಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸ್ ಅಧಿಕಾರಿ ಉಮೇಶ್ ಗೋಲ್ಹಾನಿ ಹೇಳಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅವರು ತಿಳಿಸಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…