ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.
ಗುರುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಆಕಾಸ ಏರ್ ವಿಮಾನಕ್ಕೆ ಸ್ಪೈಸ್ ಜೆಟ್ ವಿಮಾನ ತಗುಲಿದೆ. ಟ್ಯಾಕ್ಸಿವೇಯಲ್ಲಿ ಚಲಿಸುತ್ತಿದ್ದಾಗ ನಿಂತಿದ್ದ ಆಕಾಸ ಏರ್ ವಿಮಾನದ ರೆಕ್ಕೆಗೆ ಸ್ಪೈಸ್ ಜೆಟ್ ವಿಮಾನ ತಗುಲಿದೆ. ಪರಿಣಾಮ ಆಕಾಸ ಏರ್ ವಿಮಾನದ ಎಡ ಭಾಗದ ರೆಕ್ಕೆ, ಸ್ಪೈಸ್ ಜೆಟ್ನ ಬಲ ಭಾಗದ ರೆಕ್ಕೆಗೆ ಹಾನಿಯಾಗಿದೆ.
ತಾಗಿರುವ ಪ್ರಮಾಣ ಸಣ್ಣದಾಗಿತ್ತು, ಆದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.
ಸ್ಪೈಸ್ ಜೆಟ್ಬಿ೭೩೭-೭೦೦ ವಿಮಾನವು ಏರ್ಪೋರ್ಟ್ನಲ್ಲಿ ಟ್ಯಾಕ್ಸಿ ವೇನಲ್ಲಿ ನಿಂತಿದ್ದಾಗ ನೆಲಕ್ಕೆ ಉರುಳಿತ್ತು. ಇದರ ಪರಿಣಾಮ ಅದರ ಬಲ ರೆಕ್ಕೆ ಆಕಾಸ ಏರ್ನ ವಿಮಾನಕ್ಕೆ ತಾಗಿ ಹಾನಿಯಾಗಿದೆ. ಇದೇ ವೇಳೆ ಆಕಾಸ ಏರ್ನ ಎಡ ರೆಕ್ಕೆ ಹಾನಿಯಾಗಿದ್ದು, ಸ್ಟೆಬಿಲೈಸರ್ ಕೂಡ ಹಾಳಾಗಿದೆ. ಹಾನಿಗೆ ಒಳಗಾದ ಆಕಾಸ ಏರ್ ವಿಮಾನವು (ಸಂಖ್ಯೆ ಕ್ಯೂಪಿ ೧೪೦೬) ದೆಹಲಿಯಿಂದ ಹೈದರಾಬಾದ್ಗೆ ಹಾರುತ್ತಿತ್ತು ಎಂದು ಆಕಾಸ ಏರ್ ತಿಳಿಸಿದೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…
ಟರ್ಕಿ : ಟರ್ಕಿಯ ಕಹ್ರಮನ್ಮರಾಸ್ ಪ್ರಾಂತ್ಯದ ಶಾಲೆಯಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ತಂದೆಯ (ಮಾಜಿ ಪೊಲೀಸ್ ಅಧಿಕಾರಿ) ಬಂದೂಕನ್ನು…