ದೇಶ- ವಿದೇಶ

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.

ಗುರುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಆಕಾಸ ಏರ್ ವಿಮಾನಕ್ಕೆ ಸ್ಪೈಸ್ ಜೆಟ್ ವಿಮಾನ ತಗುಲಿದೆ. ಟ್ಯಾಕ್ಸಿವೇಯಲ್ಲಿ ಚಲಿಸುತ್ತಿದ್ದಾಗ ನಿಂತಿದ್ದ ಆಕಾಸ ಏರ್ ವಿಮಾನದ ರೆಕ್ಕೆಗೆ ಸ್ಪೈಸ್ ಜೆಟ್ ವಿಮಾನ ತಗುಲಿದೆ. ಪರಿಣಾಮ ಆಕಾಸ ಏರ್ ವಿಮಾನದ ಎಡ ಭಾಗದ ರೆಕ್ಕೆ, ಸ್ಪೈಸ್ ಜೆಟ್‌ನ ಬಲ ಭಾಗದ ರೆಕ್ಕೆಗೆ ಹಾನಿಯಾಗಿದೆ.

ತಾಗಿರುವ ಪ್ರಮಾಣ ಸಣ್ಣದಾಗಿತ್ತು, ಆದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.

ಸ್ಪೈಸ್ ಜೆಟ್‌ಬಿ೭೩೭-೭೦೦ ವಿಮಾನವು ಏರ್‌ಪೋರ್ಟ್‌ನಲ್ಲಿ ಟ್ಯಾಕ್ಸಿ ವೇನಲ್ಲಿ ನಿಂತಿದ್ದಾಗ ನೆಲಕ್ಕೆ ಉರುಳಿತ್ತು. ಇದರ ಪರಿಣಾಮ ಅದರ ಬಲ ರೆಕ್ಕೆ ಆಕಾಸ ಏರ್‌ನ ವಿಮಾನಕ್ಕೆ ತಾಗಿ ಹಾನಿಯಾಗಿದೆ. ಇದೇ ವೇಳೆ ಆಕಾಸ ಏರ್‌ನ ಎಡ ರೆಕ್ಕೆ ಹಾನಿಯಾಗಿದ್ದು, ಸ್ಟೆಬಿಲೈಸರ್ ಕೂಡ ಹಾಳಾಗಿದೆ. ಹಾನಿಗೆ ಒಳಗಾದ ಆಕಾಸ ಏರ್ ವಿಮಾನವು (ಸಂಖ್ಯೆ ಕ್ಯೂಪಿ ೧೪೦೬) ದೆಹಲಿಯಿಂದ ಹೈದರಾಬಾದ್‌ಗೆ ಹಾರುತ್ತಿತ್ತು ಎಂದು ಆಕಾಸ ಏರ್ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

58 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

14 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

14 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

14 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

14 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

14 hours ago