ದೇಶ- ವಿದೇಶ

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.

ಗುರುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಆಕಾಸ ಏರ್ ವಿಮಾನಕ್ಕೆ ಸ್ಪೈಸ್ ಜೆಟ್ ವಿಮಾನ ತಗುಲಿದೆ. ಟ್ಯಾಕ್ಸಿವೇಯಲ್ಲಿ ಚಲಿಸುತ್ತಿದ್ದಾಗ ನಿಂತಿದ್ದ ಆಕಾಸ ಏರ್ ವಿಮಾನದ ರೆಕ್ಕೆಗೆ ಸ್ಪೈಸ್ ಜೆಟ್ ವಿಮಾನ ತಗುಲಿದೆ. ಪರಿಣಾಮ ಆಕಾಸ ಏರ್ ವಿಮಾನದ ಎಡ ಭಾಗದ ರೆಕ್ಕೆ, ಸ್ಪೈಸ್ ಜೆಟ್‌ನ ಬಲ ಭಾಗದ ರೆಕ್ಕೆಗೆ ಹಾನಿಯಾಗಿದೆ.

ತಾಗಿರುವ ಪ್ರಮಾಣ ಸಣ್ಣದಾಗಿತ್ತು, ಆದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.

ಸ್ಪೈಸ್ ಜೆಟ್‌ಬಿ೭೩೭-೭೦೦ ವಿಮಾನವು ಏರ್‌ಪೋರ್ಟ್‌ನಲ್ಲಿ ಟ್ಯಾಕ್ಸಿ ವೇನಲ್ಲಿ ನಿಂತಿದ್ದಾಗ ನೆಲಕ್ಕೆ ಉರುಳಿತ್ತು. ಇದರ ಪರಿಣಾಮ ಅದರ ಬಲ ರೆಕ್ಕೆ ಆಕಾಸ ಏರ್‌ನ ವಿಮಾನಕ್ಕೆ ತಾಗಿ ಹಾನಿಯಾಗಿದೆ. ಇದೇ ವೇಳೆ ಆಕಾಸ ಏರ್‌ನ ಎಡ ರೆಕ್ಕೆ ಹಾನಿಯಾಗಿದ್ದು, ಸ್ಟೆಬಿಲೈಸರ್ ಕೂಡ ಹಾಳಾಗಿದೆ. ಹಾನಿಗೆ ಒಳಗಾದ ಆಕಾಸ ಏರ್ ವಿಮಾನವು (ಸಂಖ್ಯೆ ಕ್ಯೂಪಿ ೧೪೦೬) ದೆಹಲಿಯಿಂದ ಹೈದರಾಬಾದ್‌ಗೆ ಹಾರುತ್ತಿತ್ತು ಎಂದು ಆಕಾಸ ಏರ್ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

7 mins ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

17 mins ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

3 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

8 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

8 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

8 hours ago