ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.
ಗುರುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಆಕಾಸ ಏರ್ ವಿಮಾನಕ್ಕೆ ಸ್ಪೈಸ್ ಜೆಟ್ ವಿಮಾನ ತಗುಲಿದೆ. ಟ್ಯಾಕ್ಸಿವೇಯಲ್ಲಿ ಚಲಿಸುತ್ತಿದ್ದಾಗ ನಿಂತಿದ್ದ ಆಕಾಸ ಏರ್ ವಿಮಾನದ ರೆಕ್ಕೆಗೆ ಸ್ಪೈಸ್ ಜೆಟ್ ವಿಮಾನ ತಗುಲಿದೆ. ಪರಿಣಾಮ ಆಕಾಸ ಏರ್ ವಿಮಾನದ ಎಡ ಭಾಗದ ರೆಕ್ಕೆ, ಸ್ಪೈಸ್ ಜೆಟ್ನ ಬಲ ಭಾಗದ ರೆಕ್ಕೆಗೆ ಹಾನಿಯಾಗಿದೆ.
ತಾಗಿರುವ ಪ್ರಮಾಣ ಸಣ್ಣದಾಗಿತ್ತು, ಆದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.
ಸ್ಪೈಸ್ ಜೆಟ್ಬಿ೭೩೭-೭೦೦ ವಿಮಾನವು ಏರ್ಪೋರ್ಟ್ನಲ್ಲಿ ಟ್ಯಾಕ್ಸಿ ವೇನಲ್ಲಿ ನಿಂತಿದ್ದಾಗ ನೆಲಕ್ಕೆ ಉರುಳಿತ್ತು. ಇದರ ಪರಿಣಾಮ ಅದರ ಬಲ ರೆಕ್ಕೆ ಆಕಾಸ ಏರ್ನ ವಿಮಾನಕ್ಕೆ ತಾಗಿ ಹಾನಿಯಾಗಿದೆ. ಇದೇ ವೇಳೆ ಆಕಾಸ ಏರ್ನ ಎಡ ರೆಕ್ಕೆ ಹಾನಿಯಾಗಿದ್ದು, ಸ್ಟೆಬಿಲೈಸರ್ ಕೂಡ ಹಾಳಾಗಿದೆ. ಹಾನಿಗೆ ಒಳಗಾದ ಆಕಾಸ ಏರ್ ವಿಮಾನವು (ಸಂಖ್ಯೆ ಕ್ಯೂಪಿ ೧೪೦೬) ದೆಹಲಿಯಿಂದ ಹೈದರಾಬಾದ್ಗೆ ಹಾರುತ್ತಿತ್ತು ಎಂದು ಆಕಾಸ ಏರ್ ತಿಳಿಸಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…