ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ ಹೊತ್ತ ಹಡಗು ಹಾಗೂ ಅಮೆರಿಕದಿಂದ 16 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿ ತಂದಿರುವ ಹಡಗು ನವಮಂಗಳೂರು ಬಂದರಿಗೆ ಆಗಮಿಸಿವೆ.
ರಷ್ಯಾದ ಪ್ರಿಮೊರ್ಸ್ಕ್ ಎಂಬಲ್ಲಿಂದ ಉರಾಲ್ ಕಚ್ಚಾ ತೈಲ ತುಂಬಿಕೊಂಡು ಬಂದಿರುವ ’ಅಕ್ವಾ ಟೈಟನ್’ ಎಂಬ ಹಡಗು ಚೀನಾದ ರಿಝಾವೊ ಬಂದರಿನತ್ತ ಹೊರಟಿತ್ತು. ಆದರೆ, ಬದಲಾದ ಪರಿಸ್ಥಿತಿಯಲ್ಲಿ ದಿಕ್ಕು ಬದಲಿಸಿ ಮಂಗಳೂರಿಗೆ ಶನಿವಾರ ತಡರಾತ್ರಿ ಬಂದಿದೆ. ಈ ಕಚ್ಚಾತೈಲವನ್ನು ಎಂಆರ್ಪಿಎಲ್ ಸಂಸ್ಕರಣಾ ಘಟಕಕ್ಕೆ ಪೂರೈಸಲಾಗುತ್ತಿದ್ದು, ಹಡಗಿನಿಂದ ತೈಲ ಇಳಿಸುವ ಪ್ರಕ್ರಿಯೆ ನಡೆದಿದೆ.
ಈ ಕುರಿತು ನವಮಂಗಳೂರು ಬಂದರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ ಹೊತ್ತ ಹಡಗು ಶನಿವಾರ ತಡರಾತ್ರಿ ಬಂದರಿಗೆ ಸುರಕ್ಷಿತವಾಗಿ ತಲುಪಿದೆ ಎಂದು ದೃಢಪಡಿಸಿದ್ದಾರೆ.
ಅಮೆರಿಕದಿಂದ ಬಂತು ಎಲ್ಪಿಜಿ
ಅಮೆರಿಕದಿಂದ 16 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ಹಡಗು ನವಮಂಗಳೂರು ಬಂದರಿಗೆ ಭಾನುವಾರ ಬೆಳಿಗ್ಗೆ ಆಗಮಿಸಿದೆ. ಅಮೆರಿಕದ ಟೆಕ್ಸಾಸ್ನ ನೆದರ್ಲ್ಯಾಂಡ್ ಎಂಬಲ್ಲಿಂದ ಹೊರಟ ’ಪಿಕ್ಸಿಸ್ ಪಯೊನಿಯರ್’ ಎಂಬ ಕಾರ್ಗೋ ನೌಕೆ ಇದಾಗಿದೆ. ಇದು ಅನಿಲ ಸರಬರಾಜಿಗೆ ಮಹತ್ವದ ನೆರವಾಗಲಿದೆ.
ನೌಕೆಯಲ್ಲಿ ಒಟ್ಟು ಸುಮಾರು 16 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿಯನ್ನು ಮಂಗಳೂರಿನ ಎಜಿಸ್ ಅನಿಲ ಸಂಗ್ರಹಣಾ ಘಟಕಕ್ಕೆ ಪೂರೈಸಲಾಗುತ್ತಿದೆ. ಅನಿಲ ಇಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನವಮಂಗಳೂರು ಬಂದರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈಗಾಗಲೇ ‘ಶಿವಾಲಿಕ್’ ಹಾಗೂ ‘ನಂದಾದೇವಿ’ ಎಂಬ ಹಡಗುಗಳು ಈ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಭಾರತದತ್ತ ಪ್ರಯಾಣ ಬೆಳೆಸಿದ್ದವು. ಕೆಲ ದಿನಗಳ ಹಿಂದೆ ಸುರಕ್ಷಿತವಾಗಿ ಗುಜರಾತ್ ತಲುಪಿತ್ತು. ಇನ್ನೂ ಅನೇಕ ಭಾರತೀಯ ಹಡಗುಗಳು ಹಾರ್ಮುಜ್ನಲ್ಲಿಯೇ ಸಿಲುಕಿಕೊಂಡಿವೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…