ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ ಹೊತ್ತ ಹಡಗು ಹಾಗೂ ಅಮೆರಿಕದಿಂದ 16 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿ ತಂದಿರುವ ಹಡಗು ನವಮಂಗಳೂರು ಬಂದರಿಗೆ ಆಗಮಿಸಿವೆ.
ರಷ್ಯಾದ ಪ್ರಿಮೊರ್ಸ್ಕ್ ಎಂಬಲ್ಲಿಂದ ಉರಾಲ್ ಕಚ್ಚಾ ತೈಲ ತುಂಬಿಕೊಂಡು ಬಂದಿರುವ ’ಅಕ್ವಾ ಟೈಟನ್’ ಎಂಬ ಹಡಗು ಚೀನಾದ ರಿಝಾವೊ ಬಂದರಿನತ್ತ ಹೊರಟಿತ್ತು. ಆದರೆ, ಬದಲಾದ ಪರಿಸ್ಥಿತಿಯಲ್ಲಿ ದಿಕ್ಕು ಬದಲಿಸಿ ಮಂಗಳೂರಿಗೆ ಶನಿವಾರ ತಡರಾತ್ರಿ ಬಂದಿದೆ. ಈ ಕಚ್ಚಾತೈಲವನ್ನು ಎಂಆರ್ಪಿಎಲ್ ಸಂಸ್ಕರಣಾ ಘಟಕಕ್ಕೆ ಪೂರೈಸಲಾಗುತ್ತಿದ್ದು, ಹಡಗಿನಿಂದ ತೈಲ ಇಳಿಸುವ ಪ್ರಕ್ರಿಯೆ ನಡೆದಿದೆ.
ಈ ಕುರಿತು ನವಮಂಗಳೂರು ಬಂದರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ ಹೊತ್ತ ಹಡಗು ಶನಿವಾರ ತಡರಾತ್ರಿ ಬಂದರಿಗೆ ಸುರಕ್ಷಿತವಾಗಿ ತಲುಪಿದೆ ಎಂದು ದೃಢಪಡಿಸಿದ್ದಾರೆ.
ಅಮೆರಿಕದಿಂದ ಬಂತು ಎಲ್ಪಿಜಿ
ಅಮೆರಿಕದಿಂದ 16 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ಹಡಗು ನವಮಂಗಳೂರು ಬಂದರಿಗೆ ಭಾನುವಾರ ಬೆಳಿಗ್ಗೆ ಆಗಮಿಸಿದೆ. ಅಮೆರಿಕದ ಟೆಕ್ಸಾಸ್ನ ನೆದರ್ಲ್ಯಾಂಡ್ ಎಂಬಲ್ಲಿಂದ ಹೊರಟ ’ಪಿಕ್ಸಿಸ್ ಪಯೊನಿಯರ್’ ಎಂಬ ಕಾರ್ಗೋ ನೌಕೆ ಇದಾಗಿದೆ. ಇದು ಅನಿಲ ಸರಬರಾಜಿಗೆ ಮಹತ್ವದ ನೆರವಾಗಲಿದೆ.
ನೌಕೆಯಲ್ಲಿ ಒಟ್ಟು ಸುಮಾರು 16 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿಯನ್ನು ಮಂಗಳೂರಿನ ಎಜಿಸ್ ಅನಿಲ ಸಂಗ್ರಹಣಾ ಘಟಕಕ್ಕೆ ಪೂರೈಸಲಾಗುತ್ತಿದೆ. ಅನಿಲ ಇಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನವಮಂಗಳೂರು ಬಂದರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈಗಾಗಲೇ ‘ಶಿವಾಲಿಕ್’ ಹಾಗೂ ‘ನಂದಾದೇವಿ’ ಎಂಬ ಹಡಗುಗಳು ಈ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಭಾರತದತ್ತ ಪ್ರಯಾಣ ಬೆಳೆಸಿದ್ದವು. ಕೆಲ ದಿನಗಳ ಹಿಂದೆ ಸುರಕ್ಷಿತವಾಗಿ ಗುಜರಾತ್ ತಲುಪಿತ್ತು. ಇನ್ನೂ ಅನೇಕ ಭಾರತೀಯ ಹಡಗುಗಳು ಹಾರ್ಮುಜ್ನಲ್ಲಿಯೇ ಸಿಲುಕಿಕೊಂಡಿವೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…