jammu kashmeer
ಜಮ್ಮು-ಕಾಶ್ಮೀರ: ಕುಲ್ಗಾಮ್ ಅರಣ್ಯದಲ್ಲಿ ಆಪರೇಷನ್ ಅಕಲ್ ನಡೆಯುತ್ತಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಕಾರ್ಯಾಚರಣೆಯಲ್ಲಿ 9 ಮಂದಿ ಸೇನಾ ಸಿಬ್ಬಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂಲಕ ಕಳೆದ ಏಳು ದಿನಗಳಲ್ಲಿ ಗಾಯಗೊಂಡ ಸೇನಾ ಸಿಬ್ಬಂದಿಗಳ ಒಟ್ಟು ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಇಬ್ಬರು ಯೋಧರಿಗೆ ಭಾರತೀಯ ಸೇನೆ ಸಂತಾಪ ಸೂಚಿಸಿದ್ದು, ಹುತಾತ್ಮ ಯೋಧರ ಧೈರ್ಯ ಹಾಗೂ ಸಮರ್ಪಣೆ ನಮಗೆ ಶಾಶ್ವತ ಸ್ಪೂರ್ತಿ ನೀಡುತ್ತದೆ ಎಂದು ಹೇಳಿದೆ. ಭಯೋತ್ಪಾದಕ ಅಡಗುತಾಣಗಳ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿಯ ನಂತರ ಪ್ರಾರಂಭವಾದ ಈ ಕಾರ್ಯಾಚರಣೆಯು ಜಮ್ಮು-ಕಾಶ್ಮೀರದ ಅರಣ್ಯ ಪಟ್ಟಿಗಳಲ್ಲಿ ವ್ಯಾಪಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾರತೀಯ ಸೇನೆ, ಪೊಲೀಸರು ಹಾಗೂ ಕೇಂದ್ರ ಮೀಸಲು ಪಡೆಯ ಜಂಟಿ ಪಡೆಗಳು ಉಗ್ರರ ಸಂಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಇನ್ನು ಜಮ್ಮು-ಕಾಶ್ಮೀರದ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದು, ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ನಮಗೆ ಮಾಹಿತಿ ನೀಡಿ ಎಂದು ಸ್ಥಳೀಯರಿಗೆ ಮನವಿ ಮಾಡಿದ್ದಾರೆ.
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…