jammu kashmeer
ಜಮ್ಮು-ಕಾಶ್ಮೀರ: ಕುಲ್ಗಾಮ್ ಅರಣ್ಯದಲ್ಲಿ ಆಪರೇಷನ್ ಅಕಲ್ ನಡೆಯುತ್ತಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಕಾರ್ಯಾಚರಣೆಯಲ್ಲಿ 9 ಮಂದಿ ಸೇನಾ ಸಿಬ್ಬಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂಲಕ ಕಳೆದ ಏಳು ದಿನಗಳಲ್ಲಿ ಗಾಯಗೊಂಡ ಸೇನಾ ಸಿಬ್ಬಂದಿಗಳ ಒಟ್ಟು ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಇಬ್ಬರು ಯೋಧರಿಗೆ ಭಾರತೀಯ ಸೇನೆ ಸಂತಾಪ ಸೂಚಿಸಿದ್ದು, ಹುತಾತ್ಮ ಯೋಧರ ಧೈರ್ಯ ಹಾಗೂ ಸಮರ್ಪಣೆ ನಮಗೆ ಶಾಶ್ವತ ಸ್ಪೂರ್ತಿ ನೀಡುತ್ತದೆ ಎಂದು ಹೇಳಿದೆ. ಭಯೋತ್ಪಾದಕ ಅಡಗುತಾಣಗಳ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿಯ ನಂತರ ಪ್ರಾರಂಭವಾದ ಈ ಕಾರ್ಯಾಚರಣೆಯು ಜಮ್ಮು-ಕಾಶ್ಮೀರದ ಅರಣ್ಯ ಪಟ್ಟಿಗಳಲ್ಲಿ ವ್ಯಾಪಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾರತೀಯ ಸೇನೆ, ಪೊಲೀಸರು ಹಾಗೂ ಕೇಂದ್ರ ಮೀಸಲು ಪಡೆಯ ಜಂಟಿ ಪಡೆಗಳು ಉಗ್ರರ ಸಂಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಇನ್ನು ಜಮ್ಮು-ಕಾಶ್ಮೀರದ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದು, ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ನಮಗೆ ಮಾಹಿತಿ ನೀಡಿ ಎಂದು ಸ್ಥಳೀಯರಿಗೆ ಮನವಿ ಮಾಡಿದ್ದಾರೆ.
ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದೆ.…
ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್ ನಬಿನ್ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…