jammu kashmeer
ಜಮ್ಮು-ಕಾಶ್ಮೀರ: ಕುಲ್ಗಾಮ್ ಅರಣ್ಯದಲ್ಲಿ ಆಪರೇಷನ್ ಅಕಲ್ ನಡೆಯುತ್ತಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಕಾರ್ಯಾಚರಣೆಯಲ್ಲಿ 9 ಮಂದಿ ಸೇನಾ ಸಿಬ್ಬಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂಲಕ ಕಳೆದ ಏಳು ದಿನಗಳಲ್ಲಿ ಗಾಯಗೊಂಡ ಸೇನಾ ಸಿಬ್ಬಂದಿಗಳ ಒಟ್ಟು ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಇಬ್ಬರು ಯೋಧರಿಗೆ ಭಾರತೀಯ ಸೇನೆ ಸಂತಾಪ ಸೂಚಿಸಿದ್ದು, ಹುತಾತ್ಮ ಯೋಧರ ಧೈರ್ಯ ಹಾಗೂ ಸಮರ್ಪಣೆ ನಮಗೆ ಶಾಶ್ವತ ಸ್ಪೂರ್ತಿ ನೀಡುತ್ತದೆ ಎಂದು ಹೇಳಿದೆ. ಭಯೋತ್ಪಾದಕ ಅಡಗುತಾಣಗಳ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿಯ ನಂತರ ಪ್ರಾರಂಭವಾದ ಈ ಕಾರ್ಯಾಚರಣೆಯು ಜಮ್ಮು-ಕಾಶ್ಮೀರದ ಅರಣ್ಯ ಪಟ್ಟಿಗಳಲ್ಲಿ ವ್ಯಾಪಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾರತೀಯ ಸೇನೆ, ಪೊಲೀಸರು ಹಾಗೂ ಕೇಂದ್ರ ಮೀಸಲು ಪಡೆಯ ಜಂಟಿ ಪಡೆಗಳು ಉಗ್ರರ ಸಂಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಇನ್ನು ಜಮ್ಮು-ಕಾಶ್ಮೀರದ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದು, ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ನಮಗೆ ಮಾಹಿತಿ ನೀಡಿ ಎಂದು ಸ್ಥಳೀಯರಿಗೆ ಮನವಿ ಮಾಡಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…