ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯನ್ನು (ಎಲ್ಒಸಿ) ದಾಟಿ ಭಾರತದೊಳಕ್ಕೆ ಯತ್ನಿಸಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಛಿನಾರ್ ಕಾರ್ಪ್ರ್ ಪಡೆ ಎಕ್ಸ್ನಲ್ಲಿ ತಿಳಿಸಿದೆ.
ಪಹಲ್ಗಾಮ್ನಲ್ಲಿ (Pahalgam Attack) ಉಗ್ರರು ಮಂಗಳವಾರವಷ್ಟೇ ಭೀಕರ ಗುಂಡಿನ ದಾಳಿ ನಡೆಸಿ, 28 ಜನರ ಹತ್ಯೆಗೈದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಮಾಡಿತ್ತು. ಈ ದಾಳಿ ನಡೆದ 24 ಗಂಟೆಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ನಡೆದಿದೆ.





