ಕ್ವಾಲಾಲಂಪುರ: ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸತತ 2ನೇ ಬಾರಿಗೆ ದಕ್ಷಿಣ ಆಫಿಕ್ರಾದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಹಾಲಿ ಚಾಂಪಿಯನ್ ಆಗಿರುವ ಇಂಡಿಯಾ ತಂಡವೂ ಇಂದು(ಫೆಬ್ರವರಿ.2) ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.
ಈ ಪಂದ್ಯದಲ್ಲಿ ಇಂಡಿಯಾ ತಂಡವೂ 83 ರನ್ಗಳ ಗೆಲುವಿನ ಗುರಿ ಬೆನ್ನಟ್ಟಿದ್ದು, 11.2 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಈ ಮೂಲಕ ದಕ್ಷಿಣ ಆಫ್ರಿಕಾವನ್ನು ಮಣಿಸಿ ಸತತ 2ನೇ ಬಾರಿಗೆ ಟಿ-20 ವಿಶ್ವಕಪ್ ಅನ್ನು ಗೆದ್ದುಬೀಗಿದೆ.
ಟೀಂ ಇಂಡಿಯಾವನ್ನು ಕರ್ನಾಟಕದ ಆಟಗಾರ್ತಿ ನಿಕಿ ಪ್ರಸಾದ್ ಮುನ್ನಡೆಸಿದ್ದರು. ಇದೀಗ ಸ್ಮರಣೀಯ ಟ್ರೋಫಿ ಗೆಲುವಲ್ಲಿ ಯಶಸ್ವಿಯಾಗಿದ್ದಾರೆ.
ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ತಂಡ 20 ಓವರ್ಗಳಲ್ಲಿ 82 ರನ್ಗಳಿಗೆ ತನ್ನೆಲ್ಲಾ ವಿಕೆಟ್ಗಳನ್ನು ಪತನ ಮಾಡಿಕೊಂಡಿತು.
ಈ ರನ್ಗಳನ್ನು ಟೀಂ ಇಂಡಿಯಾ ಬೆನ್ನಟ್ಟಿದ್ದು, ಪ್ರಾರಂಭದಲ್ಲೇ ಜಿ.ಕಮಲಿನಿ(9) ವಿಕೆಟ್ನ್ನು ಕಳೆದುಕೊಂಡಿತು. ಆದರೆ ಸನಿಕ ಚಾಲ್ಕೆ ಜೊತೆ ಸೇರಿಕೊಂಡ ತೃಷಾ ತಂಡವನ್ನು ಗೆಲುವಿನ ದಡ ಸೇರಿದರು.
ಇನ್ನೂ ಬ್ಯಾಟಿಂಗ್ನಲ್ಲೂ ಮಿಂಚಿದ ತೃಷಾ 33 ಎಸೆತಗಳಲ್ಲಿ 44 ರನ್(8 ಬೌಂಡರಿ)ಗಳಿಸಿ ಅಜೇಯವಾಗಿ ಉಳಿದರು. ಅವರಿಗೆ ತಕ್ಕ ಸಾಥ್ ನೀಡಿದ ಸನಿಕ ಚಾಲ್ಕೆ ಔಟಾಗದೇ 26 ರನ್ಗಳನ್ನು ಗಳಿಸಿದರು.
U-19 ಮಹಿಳಾ T-20 ವಿಶ್ವಕಪ್ನ ಒಂದು ಪಂದ್ಯದಲ್ಲೂ ಸೋಲು ಕಾಣದೇ ಟೀಂ ಇಂಡಿಯಾ ಜಯ ಸಾಧಿಸಿದ್ದರೆ, ಮತ್ತೊಂದೆಡೆ ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತ್ತು.
ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ…
ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…
ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…
ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…
ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…