ದೇಶ- ವಿದೇಶ

U-19 ಮಹಿಳಾ T-20 ವಿಶ್ವಕಪ್‌: ದಕ್ಷಿಣ ಆಫಿಕ್ರಾದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ

ಕ್ವಾಲಾಲಂಪುರ: ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ-20 ವಿಶ್ವಕಪ್‌ ಟೂರ್ನಿಯಲ್ಲಿ ಸತತ 2ನೇ ಬಾರಿಗೆ ದಕ್ಷಿಣ ಆಫಿಕ್ರಾದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ಹಾಲಿ ಚಾಂಪಿಯನ್‌ ಆಗಿರುವ ಇಂಡಿಯಾ ತಂಡವೂ ಇಂದು(ಫೆಬ್ರವರಿ.2) ನಡೆದ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್‌ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.

ಈ ಪಂದ್ಯದಲ್ಲಿ ಇಂಡಿಯಾ ತಂಡವೂ 83 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ್ದು, 11.2 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ ಗುರಿ ತಲುಪಿತು. ಈ ಮೂಲಕ ದಕ್ಷಿಣ ಆಫ್ರಿಕಾವನ್ನು ಮಣಿಸಿ ಸತತ 2ನೇ ಬಾರಿಗೆ ಟಿ-20 ವಿಶ್ವಕಪ್‌ ಅನ್ನು ಗೆದ್ದುಬೀಗಿದೆ.

ಟೀಂ ಇಂಡಿಯಾವನ್ನು ಕರ್ನಾಟಕದ ಆಟಗಾರ್ತಿ ನಿಕಿ ಪ್ರಸಾದ್‌ ಮುನ್ನಡೆಸಿದ್ದರು. ಇದೀಗ ಸ್ಮರಣೀಯ ಟ್ರೋಫಿ ಗೆಲುವಲ್ಲಿ ಯಶಸ್ವಿಯಾಗಿದ್ದಾರೆ.

ಇಂದು ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ದಕ್ಷಿಣ ಆಫ್ರಿಕಾ ತಂಡ 20 ಓವರ್‌ಗಳಲ್ಲಿ 82 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಪತನ ಮಾಡಿಕೊಂಡಿತು.

ಈ ರನ್‌ಗಳನ್ನು ಟೀಂ ಇಂಡಿಯಾ ಬೆನ್ನಟ್ಟಿದ್ದು, ಪ್ರಾರಂಭದಲ್ಲೇ ಜಿ.ಕಮಲಿನಿ(9) ವಿಕೆಟ್‌ನ್ನು ಕಳೆದುಕೊಂಡಿತು. ಆದರೆ ಸನಿಕ ಚಾಲ್ಕೆ ಜೊತೆ ಸೇರಿಕೊಂಡ ತೃಷಾ ತಂಡವನ್ನು ಗೆಲುವಿನ ದಡ ಸೇರಿದರು.

ಇನ್ನೂ ಬ್ಯಾಟಿಂಗ್‌ನಲ್ಲೂ ಮಿಂಚಿದ ತೃಷಾ 33 ಎಸೆತಗಳಲ್ಲಿ 44 ರನ್‌(8 ಬೌಂಡರಿ)ಗಳಿಸಿ ಅಜೇಯವಾಗಿ ಉಳಿದರು. ಅವರಿಗೆ ತಕ್ಕ ಸಾಥ್‌ ನೀಡಿದ ಸನಿಕ ಚಾಲ್ಕೆ ಔಟಾಗದೇ 26 ರನ್‌ಗಳನ್ನು ಗಳಿಸಿದರು.

U-19 ಮಹಿಳಾ T-20 ವಿಶ್ವಕಪ್‌ನ ಒಂದು ಪಂದ್ಯದಲ್ಲೂ ಸೋಲು ಕಾಣದೇ ಟೀಂ ಇಂಡಿಯಾ ಜಯ ಸಾಧಿಸಿದ್ದರೆ, ಮತ್ತೊಂದೆಡೆ ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿತ್ತು.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

18 mins ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

2 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

2 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

3 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

5 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

6 hours ago