ಲಕ್ನೋ: ಪ್ರಯಾಗ್ರಾಜ್ನ ಮಹಾ ಕುಂಭಮೇಳ ನಡೆಯುವ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.
2025ರ ಜನವರಿಯಲ್ಲಿ ಮಹಾಕುಂಭಮೇಳ ನಡೆಯಲಿದ್ದು, ಅದಕ್ಕೂ ಮೊದಲು ಯುಪಿ ಸರ್ಕಾರ ಈ ಘೋಷಣೆ ಮಾಡಿದೆ.
ಹೊಸ ಜಿಲ್ಲೆಯನ್ನು ಮಹಾ ಕುಂಭಮೇಳ ಜಿಲ್ಲೆ ಎಂದು ಕರೆದಿರುವುದು ವಿಶೇಷವೆನಿಸಿದೆ. ಮುಂದಿನ ವರ್ಷ ನಡೆಯುವ ಮಹಾ ಕುಂಭಮೇಳವನ್ನು ಸಮರ್ಥವಾಗಿ ನಿರ್ವಹಿಸುವ ಸಲುವಾಗಿ ಈ ನಿರ್ಧಾರ ಮಾಡಲಾಗಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಸಿಎಂ ಯೋಗಿ ಆದಿತ್ಯನಾಥ್ ಅವರು, ಕುಂಭಮೇಳಕ್ಕೆ ಬರುವ ಸಾರ್ವಜನಿಕರಿಗೆ ಅನುಭವ ಹೆಚ್ಚಿಸುವ ಮತ್ತು ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸರ್ಕಾರದ ಬದ್ಧತೆಯನ್ನು ಈ ಕ್ರಮವು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.
ಮಹಾಕುಂಭಮೇಳ ಜಿಲ್ಲೆಯು ಸಂಪೂರ್ಣ ಮೆರವಣಿಗೆ ಮತ್ತು ನಾಲ್ಕು ತಹಸಿಲ್ಗಳ ಸದರ್, ಸೊರಾನ್, ಫುಲ್ಪುರ್ ಮತ್ತು ಕರ್ಚನಾಗಳ 67 ಗ್ರಾಮಗಳನ್ನು ಒಳಗೊಂಡಿದೆ.
ಇನ್ನು 12 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳವು ಜನವರಿ.13ರಿಂದ ಫೆಬ್ರವರಿ.26ರವರೆಗೆ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…