ಡೆಹ್ರಾಡೂನ್: ಮದುವೆ, ವಿಚ್ಚೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮಿಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡದಲ್ಲಿ ಇಂದಿನಿಂದ ಜಾರಿಗೆ ಬಂದಿದೆ.
ಸಿಎಂ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಬಿಜೆಪಿ ಸರ್ಕಾರ ಕಾಯಿದೆಯನ್ನು ಜಾರಿಗೆ ತಂದಿದೆ.
ಯುಸಿಸಿ ಅಡಿಯಲ್ಲಿ ಯಾರೇ ಮದುವೆಯಾದರೂ 60 ದಿನಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಮದುವೆ ಅವರವರ ಸಂಪ್ರದಾಯ, ಧರ್ಮಕ್ಕೆ ಅನುಸಾರವಾಗಿ ಮಾಡಬಹುದು. ಆದರೆ ನೋಂದಣಿ ಕಡ್ಡಾಯವಾಗಿದೆ. ಈ ಮೂಲಕ ಎಲ್ಲಾ ಮದುವೆಗಳಿಗೆ ಕಾನೂನಾತ್ಮಕ ರಕ್ಷಣೆ ಸಿಗಲಿದೆ.
ಸರ್ಕಾರದ ಈ ನಿರ್ಧಾರವನ್ನು ಸಿಎಂ ಪುಷ್ಕರ್ ಸಿಂಗ್ ಧಾಮಿ ಸಮರ್ಥಿಸಿದ್ದು, ಏಕರೂಪ ನಾಗರಿಕ ಸಂಹಿತೆಯು ಧರ್ಮ, ಲಿಂಗ, ಜಾತಿ ಅಥವಾ ಸಮುದಾಯದ ಭೇದ ಇಲ್ಲದ ಸಾಮರಸ್ಯದ ಸಮಾಜಕ್ಕೆ ಅಡಿಪಾಯ ಹಾಕುತ್ತದೆ ಎಂದು ಹೇಳಿದ್ದಾರೆ.
ಯುಸಿಸಿ ನಿಯಮಗಳ ಮುಖ್ಯ ಅಂಶಗಳು:
1) ಬಹುಪತ್ನಿತ್ವ ಹಾಗೂ ಬಹುಪತಿತ್ವ ನಿಷೇಧ
2) 60 ದಿನಗಳ ಒಳಗೆ ವಿವಾಹ ನೋಂದಣಿ ಕಡ್ಡಾಯ
3) ಬಾಲಕಿಯರಿಗೂ ಆಸ್ತಿಯಲ್ಲಿ ಗಂಡು ಮಕ್ಕಳಷ್ಟೇ ಸಮಾನ ಪಾಲು
4) ಮಸ್ಲಿಂ ಮಹಿಳೆಯರಿಗೆ ದತ್ತು ಪಡೆಯುವ ಸಮಾನ ಪಾಲು
5) ಮುಸ್ಲಿಂ ಸಮುದಾಯದ ಎಲ್ಲಾ ಹಲಾಲ್ ಹಾಗೂ ಇದ್ಧತ್ ನಿಷೇಧ
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…
ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…
ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…