ದೇಶ- ವಿದೇಶ

ಉತ್ತರಾಖಂಡದಲ್ಲಿ ಏಕರೂಪದ ನಾಗರಿಕ ಸಂಹಿತೆ ಜಾರಿ

ಡೆಹ್ರಾಡೂನ್:‌ ಮದುವೆ, ವಿಚ್ಚೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮಿಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡದಲ್ಲಿ ಇಂದಿನಿಂದ ಜಾರಿಗೆ ಬಂದಿದೆ.

ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ನೇತೃತ್ವದ ಬಿಜೆಪಿ ಸರ್ಕಾರ ಕಾಯಿದೆಯನ್ನು ಜಾರಿಗೆ ತಂದಿದೆ.

ಯುಸಿಸಿ ಅಡಿಯಲ್ಲಿ ಯಾರೇ ಮದುವೆಯಾದರೂ 60 ದಿನಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಮದುವೆ ಅವರವರ ಸಂಪ್ರದಾಯ, ಧರ್ಮಕ್ಕೆ ಅನುಸಾರವಾಗಿ ಮಾಡಬಹುದು. ಆದರೆ ನೋಂದಣಿ ಕಡ್ಡಾಯವಾಗಿದೆ. ಈ ಮೂಲಕ ಎಲ್ಲಾ ಮದುವೆಗಳಿಗೆ ಕಾನೂನಾತ್ಮಕ ರಕ್ಷಣೆ ಸಿಗಲಿದೆ.

ಸರ್ಕಾರದ ಈ ನಿರ್ಧಾರವನ್ನು ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಸಮರ್ಥಿಸಿದ್ದು, ಏಕರೂಪ ನಾಗರಿಕ ಸಂಹಿತೆಯು ಧರ್ಮ, ಲಿಂಗ, ಜಾತಿ ಅಥವಾ ಸಮುದಾಯದ ಭೇದ ಇಲ್ಲದ ಸಾಮರಸ್ಯದ ಸಮಾಜಕ್ಕೆ ಅಡಿಪಾಯ ಹಾಕುತ್ತದೆ ಎಂದು ಹೇಳಿದ್ದಾರೆ.

ಯುಸಿಸಿ ನಿಯಮಗಳ ಮುಖ್ಯ ಅಂಶಗಳು:

1) ಬಹುಪತ್ನಿತ್ವ ಹಾಗೂ ಬಹುಪತಿತ್ವ ನಿಷೇಧ
2) 60 ದಿನಗಳ ಒಳಗೆ ವಿವಾಹ ನೋಂದಣಿ ಕಡ್ಡಾಯ
3) ಬಾಲಕಿಯರಿಗೂ ಆಸ್ತಿಯಲ್ಲಿ ಗಂಡು ಮಕ್ಕಳಷ್ಟೇ ಸಮಾನ ಪಾಲು
4) ಮಸ್ಲಿಂ ಮಹಿಳೆಯರಿಗೆ ದತ್ತು ಪಡೆಯುವ ಸಮಾನ ಪಾಲು
5) ಮುಸ್ಲಿಂ ಸಮುದಾಯದ ಎಲ್ಲಾ ಹಲಾಲ್‌ ಹಾಗೂ ಇದ್ಧತ್‌ ನಿಷೇಧ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

14 mins ago

ಅದ್ಧೂರಿಯಾಗಿ ಬೂದನೂರು ಉತ್ಸವ ಆಚರಣೆ : ಪಿ.ರವಿಕುಮಾರ್

ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು…

29 mins ago

ಬಾಲ ನಟ, ನಟಿ : ಜಿಲ್ಲಾಧಿಕಾರಿಯಿಂದ ಅನುಮತಿ ಕಡ್ಡಾಯ

ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು)…

47 mins ago

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

2 hours ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

2 hours ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

4 hours ago