ಬೆಂಗಳೂರು: ಸನಾತನ ಧರ್ಮವನ್ನು ಸಾಂಕ್ರಾಮಿಕ ರೋಗಕ್ಕೆ ಹೋಲಿಕೆ ಮಾಡಿ ಅಪಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯ್ನಿಧಿ ಸ್ಟಾಲಿನ್ ಅವರು ಖುದ್ದು ಬೆಂಗಳೂರಿನ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು.
ಇಂದು (ಜೂನ್.25) ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.
ಉದಯ್ನಿಧಿ ಸ್ಟಾಲಿನ್ ಹೇಳಿಕೆ ಉಲ್ಲೇಖಿಸಿ ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ಕೋರ್ಟ್ ನೋಟಿಸ್ ನೀಡಿತ್ತು. ಹೀಗಾಗಿ ಅವರು ನ್ಯಾಯಲಯಕ್ಕೆ ಹಾಜರಾಗಿದ್ದಾರೆ.
ಸೆಪ್ಟೆಂಬರ್ 4, 2023 ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ್ದ ಉದಯ್ನಿಧಿ ಸ್ಟಾಲಿನ್ ಅವರು, ಸನಾತನ ಧರ್ಮ ಡೆಂಗಿ ಮಲೇರಿಯಾ ಹಾಗೂ ಕೊರೊನಾ ಇದ್ದಂತೆ ಇವುಗಳನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಅವರು ಹೇಳಿದ್ದರು.
ಈ ಬಗ್ಗೆ ದೇಶಾದ್ಯಂತ ಹಲವಾರು ಹಿರಿಯ ಮುಖಂಡರು, ರಾಜಕೀಯ ವ್ಯಕ್ತಿಗಳು ವಿರೋಧಿಸಿದ್ದರು. ಹಾಗೂ ಸ್ಟಾಲಿನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…