ದೇಶ- ವಿದೇಶ

ಸನಾತನ ಧರ್ಮ ವಿರುದ್ಧ ಹೇಳಿಕೆ ಪ್ರಕರಣ: ಖುದ್ದು ನ್ಯಾಯಾಲಯಕ್ಕೆ ಹಾಜರಾದ ಉದಯ್‌ನಿಧಿ

ಬೆಂಗಳೂರು: ಸನಾತನ ಧರ್ಮವನ್ನು ಸಾಂಕ್ರಾಮಿಕ ರೋಗಕ್ಕೆ ಹೋಲಿಕೆ ಮಾಡಿ ಅಪಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯ್‌ನಿಧಿ ಸ್ಟಾಲಿನ್‌ ಅವರು ಖುದ್ದು ಬೆಂಗಳೂರಿನ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು.

ಇಂದು (ಜೂನ್‌.25) ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

ಉದಯ್‌ನಿಧಿ ಸ್ಟಾಲಿನ್‌ ಹೇಳಿಕೆ ಉಲ್ಲೇಖಿಸಿ ಸಾಮಾಜಿಕ ಕಾರ್ಯಕರ್ತ ಪರಮೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ಕೋರ್ಟ್‌ ನೋಟಿಸ್‌ ನೀಡಿತ್ತು. ಹೀಗಾಗಿ ಅವರು ನ್ಯಾಯಲಯಕ್ಕೆ ಹಾಜರಾಗಿದ್ದಾರೆ.

ಸೆಪ್ಟೆಂಬರ್‌ 4, 2023 ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ್ದ ಉದಯ್‌ನಿಧಿ ಸ್ಟಾಲಿನ್‌ ಅವರು, ಸನಾತನ ಧರ್ಮ ಡೆಂಗಿ ಮಲೇರಿಯಾ ಹಾಗೂ ಕೊರೊನಾ ಇದ್ದಂತೆ ಇವುಗಳನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಅವರು ಹೇಳಿದ್ದರು.

ಈ ಬಗ್ಗೆ ದೇಶಾದ್ಯಂತ ಹಲವಾರು ಹಿರಿಯ ಮುಖಂಡರು, ರಾಜಕೀಯ ವ್ಯಕ್ತಿಗಳು ವಿರೋಧಿಸಿದ್ದರು. ಹಾಗೂ ಸ್ಟಾಲಿನ್‌ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago