ಬೆಂಗಳೂರು: ಸನಾತನ ಧರ್ಮವನ್ನು ಸಾಂಕ್ರಾಮಿಕ ರೋಗಕ್ಕೆ ಹೋಲಿಕೆ ಮಾಡಿ ಅಪಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯ್ನಿಧಿ ಸ್ಟಾಲಿನ್ ಅವರು ಖುದ್ದು ಬೆಂಗಳೂರಿನ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು.
ಇಂದು (ಜೂನ್.25) ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.
ಉದಯ್ನಿಧಿ ಸ್ಟಾಲಿನ್ ಹೇಳಿಕೆ ಉಲ್ಲೇಖಿಸಿ ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ಕೋರ್ಟ್ ನೋಟಿಸ್ ನೀಡಿತ್ತು. ಹೀಗಾಗಿ ಅವರು ನ್ಯಾಯಲಯಕ್ಕೆ ಹಾಜರಾಗಿದ್ದಾರೆ.
ಸೆಪ್ಟೆಂಬರ್ 4, 2023 ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ್ದ ಉದಯ್ನಿಧಿ ಸ್ಟಾಲಿನ್ ಅವರು, ಸನಾತನ ಧರ್ಮ ಡೆಂಗಿ ಮಲೇರಿಯಾ ಹಾಗೂ ಕೊರೊನಾ ಇದ್ದಂತೆ ಇವುಗಳನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಅವರು ಹೇಳಿದ್ದರು.
ಈ ಬಗ್ಗೆ ದೇಶಾದ್ಯಂತ ಹಲವಾರು ಹಿರಿಯ ಮುಖಂಡರು, ರಾಜಕೀಯ ವ್ಯಕ್ತಿಗಳು ವಿರೋಧಿಸಿದ್ದರು. ಹಾಗೂ ಸ್ಟಾಲಿನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…