ತಿರುವನಂತಪುರ: ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿರುವುದು ಸಾಂವಿಧಾನಿಕವಾಗಿ ಊರ್ಜಿತವಲ್ಲ. ಈ ನಿರ್ಧಾರ ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ತಿಳಿಸಿದ್ದಾರೆ.
ತಿರುವನಂತಪುರದಲ್ಲಿ ಇಂದು(ಫೆಬ್ರವರಿ.6) ನಡೆದ ಮಾತೃಭೂಮಿ ಅಂತರಾಷ್ಟ್ರೀಯ ಅಕ್ಷರಗಳ ಉತ್ಸವದ ಆರನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯೂ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಈ ನಿರ್ಧಾರ ಸಾಂವಿಧಾನಿಕವಾಗಿ ಊರ್ಜಿತವಲ್ಲ ಎಂದರು.
ಒಂದು ರಾಷ್ಟ್ರ, ಒಂದು ಚುನಾವಣೆಯ ಮೂಲಕ ದೇಶದಲ್ಲಿ ಚುನಾವಣೆ ನಡೆಸಿದಾಗ ಪಕ್ಷಾಂತರ ಅಥವಾ ಆತ್ಮವಿಶ್ವಾಸದ ನಿರ್ಣಯದಿಂದ ರಾಜ್ಯ ಸರ್ಕಾರ ಪತನವಾದರೆ, ಮುಂದಿನ ಲೋಕಸಭೆ ಚುನಾವಣೆ ನಡೆಯುವರೆಗೂ ಆಯಾಯ ರಾಜ್ಯಗಳು ಕಾಯಬೇಕಾಗುತ್ತದೆ. ಅಲ್ಲದೇ ಈ ತೀರ್ಮಾನದಿಂದ ಸಂವಿಧಾನದ 174ನೇ ವಿಧಿಯನ್ನು ದುರ್ಬಲಗೊಳಿಸುತ್ತದೆ ಹಾಗೂ ಒಕ್ಕೂಟ ವ್ಯವಸ್ಥೆಯ ಮೂಲ ರಚನೆಯನ್ನು ಉಲ್ಲಂಘಿಸಲಾಗುತ್ತದೆ ಎಂದು ಹೇಳಿದರು.
ಇನ್ನೂ ಕೇಂದ್ರ ಬಜೆಟ್ನಲ್ಲಿ ಈ ಬಾರಿ ತಮಿಳುನಾಡು ಮತ್ತು ಕೇರಳ ರಾಜ್ಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…
ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್ ಪುಂಡರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…
ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.19ರವರೆಗೆ ಅಧಿವೇಶನ…