ತಿರುವನಂತಪುರ: ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿರುವುದು ಸಾಂವಿಧಾನಿಕವಾಗಿ ಊರ್ಜಿತವಲ್ಲ. ಈ ನಿರ್ಧಾರ ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ತಿಳಿಸಿದ್ದಾರೆ.
ತಿರುವನಂತಪುರದಲ್ಲಿ ಇಂದು(ಫೆಬ್ರವರಿ.6) ನಡೆದ ಮಾತೃಭೂಮಿ ಅಂತರಾಷ್ಟ್ರೀಯ ಅಕ್ಷರಗಳ ಉತ್ಸವದ ಆರನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯೂ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಈ ನಿರ್ಧಾರ ಸಾಂವಿಧಾನಿಕವಾಗಿ ಊರ್ಜಿತವಲ್ಲ ಎಂದರು.
ಒಂದು ರಾಷ್ಟ್ರ, ಒಂದು ಚುನಾವಣೆಯ ಮೂಲಕ ದೇಶದಲ್ಲಿ ಚುನಾವಣೆ ನಡೆಸಿದಾಗ ಪಕ್ಷಾಂತರ ಅಥವಾ ಆತ್ಮವಿಶ್ವಾಸದ ನಿರ್ಣಯದಿಂದ ರಾಜ್ಯ ಸರ್ಕಾರ ಪತನವಾದರೆ, ಮುಂದಿನ ಲೋಕಸಭೆ ಚುನಾವಣೆ ನಡೆಯುವರೆಗೂ ಆಯಾಯ ರಾಜ್ಯಗಳು ಕಾಯಬೇಕಾಗುತ್ತದೆ. ಅಲ್ಲದೇ ಈ ತೀರ್ಮಾನದಿಂದ ಸಂವಿಧಾನದ 174ನೇ ವಿಧಿಯನ್ನು ದುರ್ಬಲಗೊಳಿಸುತ್ತದೆ ಹಾಗೂ ಒಕ್ಕೂಟ ವ್ಯವಸ್ಥೆಯ ಮೂಲ ರಚನೆಯನ್ನು ಉಲ್ಲಂಘಿಸಲಾಗುತ್ತದೆ ಎಂದು ಹೇಳಿದರು.
ಇನ್ನೂ ಕೇಂದ್ರ ಬಜೆಟ್ನಲ್ಲಿ ಈ ಬಾರಿ ತಮಿಳುನಾಡು ಮತ್ತು ಕೇರಳ ರಾಜ್ಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…