ದೇಶ- ವಿದೇಶ

ಒಂದು ರಾಷ್ಟ್ರ, ಒಂದು ಚುನಾವಣೆ ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ: ಉದಯನಿಧಿ ಸ್ಟಾಲಿನ್‌

ತಿರುವನಂತಪುರ: ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿರುವುದು ಸಾಂವಿಧಾನಿಕವಾಗಿ ಊರ್ಜಿತವಲ್ಲ. ಈ ನಿರ್ಧಾರ ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ ತಿಳಿಸಿದ್ದಾರೆ.

ತಿರುವನಂತಪುರದಲ್ಲಿ ಇಂದು(ಫೆಬ್ರವರಿ.6) ನಡೆದ ಮಾತೃಭೂಮಿ ಅಂತರಾಷ್ಟ್ರೀಯ ಅಕ್ಷರಗಳ ಉತ್ಸವದ ಆರನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯೂ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಈ ನಿರ್ಧಾರ ಸಾಂವಿಧಾನಿಕವಾಗಿ ಊರ್ಜಿತವಲ್ಲ ಎಂದರು.

ಒಂದು ರಾಷ್ಟ್ರ, ಒಂದು ಚುನಾವಣೆಯ ಮೂಲಕ ದೇಶದಲ್ಲಿ ಚುನಾವಣೆ ನಡೆಸಿದಾಗ ಪಕ್ಷಾಂತರ ಅಥವಾ ಆತ್ಮವಿಶ್ವಾಸದ ನಿರ್ಣಯದಿಂದ ರಾಜ್ಯ ಸರ್ಕಾರ ಪತನವಾದರೆ, ಮುಂದಿನ ಲೋಕಸಭೆ ಚುನಾವಣೆ ನಡೆಯುವರೆಗೂ ಆಯಾಯ ರಾಜ್ಯಗಳು ಕಾಯಬೇಕಾಗುತ್ತದೆ. ಅಲ್ಲದೇ ಈ ತೀರ್ಮಾನದಿಂದ ಸಂವಿಧಾನದ 174ನೇ ವಿಧಿಯನ್ನು ದುರ್ಬಲಗೊಳಿಸುತ್ತದೆ ಹಾಗೂ ಒಕ್ಕೂಟ ವ್ಯವಸ್ಥೆಯ ಮೂಲ ರಚನೆಯನ್ನು ಉಲ್ಲಂಘಿಸಲಾಗುತ್ತದೆ ಎಂದು ಹೇಳಿದರು.

ಇನ್ನೂ ಕೇಂದ್ರ ಬಜೆಟ್‌ನಲ್ಲಿ ಈ ಬಾರಿ ತಮಿಳುನಾಡು ಮತ್ತು ಕೇರಳ ರಾಜ್ಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

6 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

6 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

6 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

6 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

6 hours ago